ಕಮಲದೆಲೆಯ ಮೇಲೆ

ಕಮಲದೆಲೆಯ ಮೇಲೆ ಜಲದ
ಬಿಂದು ಎಂದೂ ನಿಲ್ಲದು
ವಿಮಲ ಮಾನಸ ದಲದ ಮೇಲೆ
ಮಲಿನ ಚಿಂತನೆ ಬಾರದು

ರಾತ್ರಿ ಸಮಯದಿ ದೂರಗಾಮಿ
ದೀಪ ಹೇಗೆ ಹೊಳೆವುದು
ಹಾಗೆ ಮಸ್ತಕ ಮಣಿಯು ಫಳಫಳ
ಹೊಳೆದು ಕತ್ತಲೆ ಕಳೆವುದು

ಎರಡು ಕಣ್ಣೊಳು ಜ್ಞಾನಯೋಗದ
ಜೋಡು ದೀಪಾ ಬೆಳಗಲಿ
ಆತ್ಮ ಪರಿವರ್‍ತನೆಯ ಮಾರ್‍ಗದಿ
ವಿಶ್ವ ಪಲ್ಲಟವಾಗಲಿ

ಇದೇ ಸುಂದರ ಆತ್ಮ ಯಾತ್ರೆಯು
ಸುಖದ ಬೆಳಕಿನ ಪಯಣವು
ಎತ್ತರೆತ್ತರ ಶಿವನ ಹತ್ತಿರ
ಉತ್ತಮೋತ್ತಮ ಮಿಲನವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸ್ತಿತ್ವ
Next post ಉದ್ಯೋಗದೊಳುನ್ನತದುದ್ಯೋಗ ಕೃಷಿಯಲ್ಲದಿನ್ನೇನು?

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…