Home / ಕವನ / ಕವಿತೆ / ಮಗೂ……

ಮಗೂ……

ಈ ಮೂಗು ಚಂದ ಈ ಬಾಯಿ ಚಂದ
ಈ ಕಣ್ಣು ಈ ಕಾಲು ಈ ಕೈಯ್ಯಿ ಈ ಮೈಯ್ಯಿ
ಚಂದ ನಿನ್ನ ನಗೆ ಚಂದ
ನೀನತ್ತ ಅಳುವೂ ಚಂದ
ನೀನೇ ಚಂದ ಸ್ವಚ್ಚಂದ

ನೀನೇನಾಗಲಿದ್ದಿಯಾ?
ನನಗೆ ಗೊತ್ತಿಲ್ಲ
ಆದರೆ ಇದು ಖಾತ್ರಿ

ಈ ಪುಟ್ಟ ಶರೀರ
ಇಷ್ಟುದ್ದ ಬೆಳೆಯುತ್ತದೆ
ಈ ಬತ್ತಲೆ ಶರೀರ ಹೀಗೇ ಇರುವುದಿಲ್ಲ
ಇದರ ಮೇಲೊಂದು ಅಂಗಿ
ಕೆಳಗೊಂದು ಚಡ್ಡಿ
ಈ ಸ್ತಬ್ದ ಜಗದಿಂದ ಶಬ್ಬ ಲೋಕಕೆ ಪಯಣ
“ಈತ ನಾಳೆಯ ದಿವಸ ಹೀಗಾಗಬಹುದು
ಹಾಗಾಗಬಹುದು ಅಲ್ಲ
ಹೇಗಾಗಬಹುದು ?”

ಒಂದೊಂದ್ಲೆ…ಎರಡೊಂದ್ಲೆ….
ಅ ಆ ಇ ಈ ಉ ಊ
ನಾಲ್ಕು ಗೋಡೆಗಳ ಮಧ್ಯೆ
ಈ ಮೃದು ಬೆನ್ನು ಈ
ಮೃದು ಕೈಯ್ಯಿ
ಗಟ್ಟಿಯಾಗಲೇ ಬೇಕು

ಈ ಮೂಗ ಕೆಳಗೊಂದು
ಮೀಸೆ-ಕರಿಮೀಸೆ
ಈ ಮೃದು ಕಪಾಲದ ಮೇಲೆ
ಗಡ್ಡ
ಗುಡ್ಡವನ್ನೇ ತಂದು ಕೆಳಗಿಡುವ
ಲವಲವಿಕೆ
ಹತ್ತರ ಜತೆ ಹನ್ನೊಂದಾಗುವ
ಚಡಪಡಿಕೆ

ಮಕ್ಕಳು..ಹೆಂಡತಿ…
ಈ ಪುಟ್ಟ ದೇಹಕ್ಕೆ ಯಜಮಾನಿಕೆಯ ಪಟ್ಟ
ಕೆಲಸ…ಹಣ,..ರೂಪಾಯಿ
ಏ ಮಗೂ ಏ ಮಗೂ
ಶಬ್ಬಗಳ ಸಂತೆಯಲಿ ಮಾರಿ ಹೋದೀಯ ಅಪ್ಪಿ
ತಪ್ಪಿ ಕ್ಷುಬ್ಬಗಳ ಚಿಂತೆಯಲಿ ಜಾರಿ ಹೋದೀಯ
ದುಡಿಮೆ ಬದುಕಲ್ಲ
ಮಗನೇ-ಈ ಮಕ್ಕಳೇ
ನಿನ್ನ ಹಿರಿಮೆಯಲ್ಲ-ಗುರಿಯಲ್ಲ
…ನಿನಗರ್ಥವಾಗುವುದೇ ಇಲ್ಲವಲ್ಲ !
ತಾಳ ತಪ್ಪಿದೆ ಮರೀ ನಿನ್ನ ಕುಣಿತ
ಯಾವನಾ ಭಾಗವತ ?
ಎಲ್ಲಿಯದು ಮೃದಂಗ?

ಈ ರೂಪಾಯಿಗಳಲ್ಲಿ ಮುಖವಾಡಗಳಲ್ಲಿ
ನೀನೇ ಕಳೆಯುತ್ತಿದ್ದೀಯಾ
ಕೊನೆಗೊಮ್ಮೆ ಶಬ್ಬಕ್ಕೂ
ನಿಲುಕದ ನಿತ್ರಾಣ
ಆವರಿಸಿ ಉದುರುತ್ತೀಯಾ
ಉದುರಿ ಬರೀ ಉಗುರು
ಹಣ್ಣುಗೂದಲು
ದೊಣ್ಣೆ ಹೀನ
ಅಸ್ಥಿಪಂಜರದ
ಪಠಿಸುತ್ತೀಯ ಪೊಳ್ಳು ವೇದಾಂತ
ಅಥವಾ ವಾಚ್ಯದುರಂತ

ಈಗ ಹೇಳು ನೀನು ಏನಾದೆ?
ಈ ಜಗವನ್ನುದ್ಧರಿಸಿದೆಯಾ?
ಗಾಂಧಿ ಆದೆಯಾ ? ಲೋಹಿಯಾ ಆದೆಯಾ ?
ಆಟ…ನಲಿದಾಟ…ಊಟ
ಮದುವೆ…ಸಂತಾನೋತ್ಪತ್ತಿ..ದುಡಿಮೆ
ಹೇಳು ಇದೇ ಜೀವನವೆ
ಮುಗಿದೇ ಹೋಯಿತೆ ನಿನ್ನ ಕತೆ?

ಬೇಡ ಮಗು
ನಿನಗಿದೆಲ್ಲ ಏಕೆ
ಈ ಕೈಯ್ಯಿ ಈ ಪುಟ್ಟ ಬಾಯಿ
ಹಾಲುಗಲ್ಲ-ಆಹಾ !
ಈಗಿದ್ದಂತೆಯೇ ಖಾಯಂ
ಇದ್ದು ಬಿಡಲಾರೆಯಾ ?

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...