Home / ಕವನ / ಕವಿತೆ / ಮಗೂ……

ಮಗೂ……

ಈ ಮೂಗು ಚಂದ ಈ ಬಾಯಿ ಚಂದ
ಈ ಕಣ್ಣು ಈ ಕಾಲು ಈ ಕೈಯ್ಯಿ ಈ ಮೈಯ್ಯಿ
ಚಂದ ನಿನ್ನ ನಗೆ ಚಂದ
ನೀನತ್ತ ಅಳುವೂ ಚಂದ
ನೀನೇ ಚಂದ ಸ್ವಚ್ಚಂದ

ನೀನೇನಾಗಲಿದ್ದಿಯಾ?
ನನಗೆ ಗೊತ್ತಿಲ್ಲ
ಆದರೆ ಇದು ಖಾತ್ರಿ

ಈ ಪುಟ್ಟ ಶರೀರ
ಇಷ್ಟುದ್ದ ಬೆಳೆಯುತ್ತದೆ
ಈ ಬತ್ತಲೆ ಶರೀರ ಹೀಗೇ ಇರುವುದಿಲ್ಲ
ಇದರ ಮೇಲೊಂದು ಅಂಗಿ
ಕೆಳಗೊಂದು ಚಡ್ಡಿ
ಈ ಸ್ತಬ್ದ ಜಗದಿಂದ ಶಬ್ಬ ಲೋಕಕೆ ಪಯಣ
“ಈತ ನಾಳೆಯ ದಿವಸ ಹೀಗಾಗಬಹುದು
ಹಾಗಾಗಬಹುದು ಅಲ್ಲ
ಹೇಗಾಗಬಹುದು ?”

ಒಂದೊಂದ್ಲೆ…ಎರಡೊಂದ್ಲೆ….
ಅ ಆ ಇ ಈ ಉ ಊ
ನಾಲ್ಕು ಗೋಡೆಗಳ ಮಧ್ಯೆ
ಈ ಮೃದು ಬೆನ್ನು ಈ
ಮೃದು ಕೈಯ್ಯಿ
ಗಟ್ಟಿಯಾಗಲೇ ಬೇಕು

ಈ ಮೂಗ ಕೆಳಗೊಂದು
ಮೀಸೆ-ಕರಿಮೀಸೆ
ಈ ಮೃದು ಕಪಾಲದ ಮೇಲೆ
ಗಡ್ಡ
ಗುಡ್ಡವನ್ನೇ ತಂದು ಕೆಳಗಿಡುವ
ಲವಲವಿಕೆ
ಹತ್ತರ ಜತೆ ಹನ್ನೊಂದಾಗುವ
ಚಡಪಡಿಕೆ

ಮಕ್ಕಳು..ಹೆಂಡತಿ…
ಈ ಪುಟ್ಟ ದೇಹಕ್ಕೆ ಯಜಮಾನಿಕೆಯ ಪಟ್ಟ
ಕೆಲಸ…ಹಣ,..ರೂಪಾಯಿ
ಏ ಮಗೂ ಏ ಮಗೂ
ಶಬ್ಬಗಳ ಸಂತೆಯಲಿ ಮಾರಿ ಹೋದೀಯ ಅಪ್ಪಿ
ತಪ್ಪಿ ಕ್ಷುಬ್ಬಗಳ ಚಿಂತೆಯಲಿ ಜಾರಿ ಹೋದೀಯ
ದುಡಿಮೆ ಬದುಕಲ್ಲ
ಮಗನೇ-ಈ ಮಕ್ಕಳೇ
ನಿನ್ನ ಹಿರಿಮೆಯಲ್ಲ-ಗುರಿಯಲ್ಲ
…ನಿನಗರ್ಥವಾಗುವುದೇ ಇಲ್ಲವಲ್ಲ !
ತಾಳ ತಪ್ಪಿದೆ ಮರೀ ನಿನ್ನ ಕುಣಿತ
ಯಾವನಾ ಭಾಗವತ ?
ಎಲ್ಲಿಯದು ಮೃದಂಗ?

ಈ ರೂಪಾಯಿಗಳಲ್ಲಿ ಮುಖವಾಡಗಳಲ್ಲಿ
ನೀನೇ ಕಳೆಯುತ್ತಿದ್ದೀಯಾ
ಕೊನೆಗೊಮ್ಮೆ ಶಬ್ಬಕ್ಕೂ
ನಿಲುಕದ ನಿತ್ರಾಣ
ಆವರಿಸಿ ಉದುರುತ್ತೀಯಾ
ಉದುರಿ ಬರೀ ಉಗುರು
ಹಣ್ಣುಗೂದಲು
ದೊಣ್ಣೆ ಹೀನ
ಅಸ್ಥಿಪಂಜರದ
ಪಠಿಸುತ್ತೀಯ ಪೊಳ್ಳು ವೇದಾಂತ
ಅಥವಾ ವಾಚ್ಯದುರಂತ

ಈಗ ಹೇಳು ನೀನು ಏನಾದೆ?
ಈ ಜಗವನ್ನುದ್ಧರಿಸಿದೆಯಾ?
ಗಾಂಧಿ ಆದೆಯಾ ? ಲೋಹಿಯಾ ಆದೆಯಾ ?
ಆಟ…ನಲಿದಾಟ…ಊಟ
ಮದುವೆ…ಸಂತಾನೋತ್ಪತ್ತಿ..ದುಡಿಮೆ
ಹೇಳು ಇದೇ ಜೀವನವೆ
ಮುಗಿದೇ ಹೋಯಿತೆ ನಿನ್ನ ಕತೆ?

ಬೇಡ ಮಗು
ನಿನಗಿದೆಲ್ಲ ಏಕೆ
ಈ ಕೈಯ್ಯಿ ಈ ಪುಟ್ಟ ಬಾಯಿ
ಹಾಲುಗಲ್ಲ-ಆಹಾ !
ಈಗಿದ್ದಂತೆಯೇ ಖಾಯಂ
ಇದ್ದು ಬಿಡಲಾರೆಯಾ ?

*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...