ಮಗೂ……

ಈ ಮೂಗು ಚಂದ ಈ ಬಾಯಿ ಚಂದ
ಈ ಕಣ್ಣು ಈ ಕಾಲು ಈ ಕೈಯ್ಯಿ ಈ ಮೈಯ್ಯಿ
ಚಂದ ನಿನ್ನ ನಗೆ ಚಂದ
ನೀನತ್ತ ಅಳುವೂ ಚಂದ
ನೀನೇ ಚಂದ ಸ್ವಚ್ಚಂದ

ನೀನೇನಾಗಲಿದ್ದಿಯಾ?
ನನಗೆ ಗೊತ್ತಿಲ್ಲ
ಆದರೆ ಇದು ಖಾತ್ರಿ

ಈ ಪುಟ್ಟ ಶರೀರ
ಇಷ್ಟುದ್ದ ಬೆಳೆಯುತ್ತದೆ
ಈ ಬತ್ತಲೆ ಶರೀರ ಹೀಗೇ ಇರುವುದಿಲ್ಲ
ಇದರ ಮೇಲೊಂದು ಅಂಗಿ
ಕೆಳಗೊಂದು ಚಡ್ಡಿ
ಈ ಸ್ತಬ್ದ ಜಗದಿಂದ ಶಬ್ಬ ಲೋಕಕೆ ಪಯಣ
“ಈತ ನಾಳೆಯ ದಿವಸ ಹೀಗಾಗಬಹುದು
ಹಾಗಾಗಬಹುದು ಅಲ್ಲ
ಹೇಗಾಗಬಹುದು ?”

ಒಂದೊಂದ್ಲೆ…ಎರಡೊಂದ್ಲೆ….
ಅ ಆ ಇ ಈ ಉ ಊ
ನಾಲ್ಕು ಗೋಡೆಗಳ ಮಧ್ಯೆ
ಈ ಮೃದು ಬೆನ್ನು ಈ
ಮೃದು ಕೈಯ್ಯಿ
ಗಟ್ಟಿಯಾಗಲೇ ಬೇಕು

ಈ ಮೂಗ ಕೆಳಗೊಂದು
ಮೀಸೆ-ಕರಿಮೀಸೆ
ಈ ಮೃದು ಕಪಾಲದ ಮೇಲೆ
ಗಡ್ಡ
ಗುಡ್ಡವನ್ನೇ ತಂದು ಕೆಳಗಿಡುವ
ಲವಲವಿಕೆ
ಹತ್ತರ ಜತೆ ಹನ್ನೊಂದಾಗುವ
ಚಡಪಡಿಕೆ

ಮಕ್ಕಳು..ಹೆಂಡತಿ…
ಈ ಪುಟ್ಟ ದೇಹಕ್ಕೆ ಯಜಮಾನಿಕೆಯ ಪಟ್ಟ
ಕೆಲಸ…ಹಣ,..ರೂಪಾಯಿ
ಏ ಮಗೂ ಏ ಮಗೂ
ಶಬ್ಬಗಳ ಸಂತೆಯಲಿ ಮಾರಿ ಹೋದೀಯ ಅಪ್ಪಿ
ತಪ್ಪಿ ಕ್ಷುಬ್ಬಗಳ ಚಿಂತೆಯಲಿ ಜಾರಿ ಹೋದೀಯ
ದುಡಿಮೆ ಬದುಕಲ್ಲ
ಮಗನೇ-ಈ ಮಕ್ಕಳೇ
ನಿನ್ನ ಹಿರಿಮೆಯಲ್ಲ-ಗುರಿಯಲ್ಲ
…ನಿನಗರ್ಥವಾಗುವುದೇ ಇಲ್ಲವಲ್ಲ !
ತಾಳ ತಪ್ಪಿದೆ ಮರೀ ನಿನ್ನ ಕುಣಿತ
ಯಾವನಾ ಭಾಗವತ ?
ಎಲ್ಲಿಯದು ಮೃದಂಗ?

ಈ ರೂಪಾಯಿಗಳಲ್ಲಿ ಮುಖವಾಡಗಳಲ್ಲಿ
ನೀನೇ ಕಳೆಯುತ್ತಿದ್ದೀಯಾ
ಕೊನೆಗೊಮ್ಮೆ ಶಬ್ಬಕ್ಕೂ
ನಿಲುಕದ ನಿತ್ರಾಣ
ಆವರಿಸಿ ಉದುರುತ್ತೀಯಾ
ಉದುರಿ ಬರೀ ಉಗುರು
ಹಣ್ಣುಗೂದಲು
ದೊಣ್ಣೆ ಹೀನ
ಅಸ್ಥಿಪಂಜರದ
ಪಠಿಸುತ್ತೀಯ ಪೊಳ್ಳು ವೇದಾಂತ
ಅಥವಾ ವಾಚ್ಯದುರಂತ

ಈಗ ಹೇಳು ನೀನು ಏನಾದೆ?
ಈ ಜಗವನ್ನುದ್ಧರಿಸಿದೆಯಾ?
ಗಾಂಧಿ ಆದೆಯಾ ? ಲೋಹಿಯಾ ಆದೆಯಾ ?
ಆಟ…ನಲಿದಾಟ…ಊಟ
ಮದುವೆ…ಸಂತಾನೋತ್ಪತ್ತಿ..ದುಡಿಮೆ
ಹೇಳು ಇದೇ ಜೀವನವೆ
ಮುಗಿದೇ ಹೋಯಿತೆ ನಿನ್ನ ಕತೆ?

ಬೇಡ ಮಗು
ನಿನಗಿದೆಲ್ಲ ಏಕೆ
ಈ ಕೈಯ್ಯಿ ಈ ಪುಟ್ಟ ಬಾಯಿ
ಹಾಲುಗಲ್ಲ-ಆಹಾ !
ಈಗಿದ್ದಂತೆಯೇ ಖಾಯಂ
ಇದ್ದು ಬಿಡಲಾರೆಯಾ ?

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೆಪ್ಟೆಂಬರ್ ತಿಂಗಳಿನ ಹುಡುಗಿಯರು
Next post ರಕ್ಷಕ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys