Home / ಕವನ / ಕವಿತೆ / ಮಗೂ……

ಮಗೂ……

ಈ ಮೂಗು ಚಂದ ಈ ಬಾಯಿ ಚಂದ
ಈ ಕಣ್ಣು ಈ ಕಾಲು ಈ ಕೈಯ್ಯಿ ಈ ಮೈಯ್ಯಿ
ಚಂದ ನಿನ್ನ ನಗೆ ಚಂದ
ನೀನತ್ತ ಅಳುವೂ ಚಂದ
ನೀನೇ ಚಂದ ಸ್ವಚ್ಚಂದ

ನೀನೇನಾಗಲಿದ್ದಿಯಾ?
ನನಗೆ ಗೊತ್ತಿಲ್ಲ
ಆದರೆ ಇದು ಖಾತ್ರಿ

ಈ ಪುಟ್ಟ ಶರೀರ
ಇಷ್ಟುದ್ದ ಬೆಳೆಯುತ್ತದೆ
ಈ ಬತ್ತಲೆ ಶರೀರ ಹೀಗೇ ಇರುವುದಿಲ್ಲ
ಇದರ ಮೇಲೊಂದು ಅಂಗಿ
ಕೆಳಗೊಂದು ಚಡ್ಡಿ
ಈ ಸ್ತಬ್ದ ಜಗದಿಂದ ಶಬ್ಬ ಲೋಕಕೆ ಪಯಣ
“ಈತ ನಾಳೆಯ ದಿವಸ ಹೀಗಾಗಬಹುದು
ಹಾಗಾಗಬಹುದು ಅಲ್ಲ
ಹೇಗಾಗಬಹುದು ?”

ಒಂದೊಂದ್ಲೆ…ಎರಡೊಂದ್ಲೆ….
ಅ ಆ ಇ ಈ ಉ ಊ
ನಾಲ್ಕು ಗೋಡೆಗಳ ಮಧ್ಯೆ
ಈ ಮೃದು ಬೆನ್ನು ಈ
ಮೃದು ಕೈಯ್ಯಿ
ಗಟ್ಟಿಯಾಗಲೇ ಬೇಕು

ಈ ಮೂಗ ಕೆಳಗೊಂದು
ಮೀಸೆ-ಕರಿಮೀಸೆ
ಈ ಮೃದು ಕಪಾಲದ ಮೇಲೆ
ಗಡ್ಡ
ಗುಡ್ಡವನ್ನೇ ತಂದು ಕೆಳಗಿಡುವ
ಲವಲವಿಕೆ
ಹತ್ತರ ಜತೆ ಹನ್ನೊಂದಾಗುವ
ಚಡಪಡಿಕೆ

ಮಕ್ಕಳು..ಹೆಂಡತಿ…
ಈ ಪುಟ್ಟ ದೇಹಕ್ಕೆ ಯಜಮಾನಿಕೆಯ ಪಟ್ಟ
ಕೆಲಸ…ಹಣ,..ರೂಪಾಯಿ
ಏ ಮಗೂ ಏ ಮಗೂ
ಶಬ್ಬಗಳ ಸಂತೆಯಲಿ ಮಾರಿ ಹೋದೀಯ ಅಪ್ಪಿ
ತಪ್ಪಿ ಕ್ಷುಬ್ಬಗಳ ಚಿಂತೆಯಲಿ ಜಾರಿ ಹೋದೀಯ
ದುಡಿಮೆ ಬದುಕಲ್ಲ
ಮಗನೇ-ಈ ಮಕ್ಕಳೇ
ನಿನ್ನ ಹಿರಿಮೆಯಲ್ಲ-ಗುರಿಯಲ್ಲ
…ನಿನಗರ್ಥವಾಗುವುದೇ ಇಲ್ಲವಲ್ಲ !
ತಾಳ ತಪ್ಪಿದೆ ಮರೀ ನಿನ್ನ ಕುಣಿತ
ಯಾವನಾ ಭಾಗವತ ?
ಎಲ್ಲಿಯದು ಮೃದಂಗ?

ಈ ರೂಪಾಯಿಗಳಲ್ಲಿ ಮುಖವಾಡಗಳಲ್ಲಿ
ನೀನೇ ಕಳೆಯುತ್ತಿದ್ದೀಯಾ
ಕೊನೆಗೊಮ್ಮೆ ಶಬ್ಬಕ್ಕೂ
ನಿಲುಕದ ನಿತ್ರಾಣ
ಆವರಿಸಿ ಉದುರುತ್ತೀಯಾ
ಉದುರಿ ಬರೀ ಉಗುರು
ಹಣ್ಣುಗೂದಲು
ದೊಣ್ಣೆ ಹೀನ
ಅಸ್ಥಿಪಂಜರದ
ಪಠಿಸುತ್ತೀಯ ಪೊಳ್ಳು ವೇದಾಂತ
ಅಥವಾ ವಾಚ್ಯದುರಂತ

ಈಗ ಹೇಳು ನೀನು ಏನಾದೆ?
ಈ ಜಗವನ್ನುದ್ಧರಿಸಿದೆಯಾ?
ಗಾಂಧಿ ಆದೆಯಾ ? ಲೋಹಿಯಾ ಆದೆಯಾ ?
ಆಟ…ನಲಿದಾಟ…ಊಟ
ಮದುವೆ…ಸಂತಾನೋತ್ಪತ್ತಿ..ದುಡಿಮೆ
ಹೇಳು ಇದೇ ಜೀವನವೆ
ಮುಗಿದೇ ಹೋಯಿತೆ ನಿನ್ನ ಕತೆ?

ಬೇಡ ಮಗು
ನಿನಗಿದೆಲ್ಲ ಏಕೆ
ಈ ಕೈಯ್ಯಿ ಈ ಪುಟ್ಟ ಬಾಯಿ
ಹಾಲುಗಲ್ಲ-ಆಹಾ !
ಈಗಿದ್ದಂತೆಯೇ ಖಾಯಂ
ಇದ್ದು ಬಿಡಲಾರೆಯಾ ?

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...