ಸಾಲುಗಳ ಬೊಂಬೆ ಕೇಳೆ

ಸಾಲು ಮೆಟ್ಟಲುಗಳನೇರಲು ಹೊರಟರೆ
ಸಾಲಭಂಜಿಕೆಗಳು ತಡೆದಾವೆ
ಸಾಲಭಂಜಿಕೆಗಳು ತಡೆದಾವೆ ನಮ್ಮ
ವಿಗಡವಿಕ್ರಮರಾಯನ ಕೇಳ್ಯಾವೆ

ಒಂದೊಂದು ಸಾಲಿಗೆ ಒಂದೊಂದು ಪ್ರಶ್ನೆ
ಇಪ್ಪತ್ತು ಬೊಂಬೆಗಳು ಕೇಳಿದರೆ
ಒಂದೊಂದು ಬೊಂಬೆಗು ಒಂದೊಂದು ಉತ್ತರ
ಜಾಣ ವಿಕ್ರಮರಾಯ ಹೇಳ್ಯಾನೆ

ಇಪ್ಪತ್ತು ಬೊಂಬೆಗೆ ಇಪ್ಪತ್ತು ಉತ್ತರ
ಜಾಣ ವಿಕ್ರಮ ರಾಯ ಹೇಳ್ಯಾನೆ
ಉತ್ತರ ಹೇಳ್ಯಾನೆ ಮೆಟ್ಟಿಲ ಹತ್ಯಾನೆ
ಪಟ್ಟದಾಸನದಲಿ ಕೂತಾನೆ

ಪಟ್ಟದಾಸನದಲ್ಲಿ ಕೂತು ವಿಕ್ರಮರಾಯ
ನೂರ್‍ಕಾಲ ಬಾಳಲಿ ನಮ ರಾಯ
ನೂರ್‍ಕಾಲ ಬಾಳಲಿ ವಿಗಡವಿಕ್ರಮರಾಯ
ಹಾಲು ಸಕ್ಕರೆ ಹಂಚಿ ಜನರಿಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಕ್ಕೂ ತಂದೆಯೇ ಕಾರಣ
Next post ಮುಳ್ಳು ಗುಲಾಬಿಯ ಮಧ್ಯೆ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys