ಸಾಲುಗಳ ಬೊಂಬೆ ಕೇಳೆ

ಸಾಲು ಮೆಟ್ಟಲುಗಳನೇರಲು ಹೊರಟರೆ
ಸಾಲಭಂಜಿಕೆಗಳು ತಡೆದಾವೆ
ಸಾಲಭಂಜಿಕೆಗಳು ತಡೆದಾವೆ ನಮ್ಮ
ವಿಗಡವಿಕ್ರಮರಾಯನ ಕೇಳ್ಯಾವೆ

ಒಂದೊಂದು ಸಾಲಿಗೆ ಒಂದೊಂದು ಪ್ರಶ್ನೆ
ಇಪ್ಪತ್ತು ಬೊಂಬೆಗಳು ಕೇಳಿದರೆ
ಒಂದೊಂದು ಬೊಂಬೆಗು ಒಂದೊಂದು ಉತ್ತರ
ಜಾಣ ವಿಕ್ರಮರಾಯ ಹೇಳ್ಯಾನೆ

ಇಪ್ಪತ್ತು ಬೊಂಬೆಗೆ ಇಪ್ಪತ್ತು ಉತ್ತರ
ಜಾಣ ವಿಕ್ರಮ ರಾಯ ಹೇಳ್ಯಾನೆ
ಉತ್ತರ ಹೇಳ್ಯಾನೆ ಮೆಟ್ಟಿಲ ಹತ್ಯಾನೆ
ಪಟ್ಟದಾಸನದಲಿ ಕೂತಾನೆ

ಪಟ್ಟದಾಸನದಲ್ಲಿ ಕೂತು ವಿಕ್ರಮರಾಯ
ನೂರ್‍ಕಾಲ ಬಾಳಲಿ ನಮ ರಾಯ
ನೂರ್‍ಕಾಲ ಬಾಳಲಿ ವಿಗಡವಿಕ್ರಮರಾಯ
ಹಾಲು ಸಕ್ಕರೆ ಹಂಚಿ ಜನರಿಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಕ್ಕೂ ತಂದೆಯೇ ಕಾರಣ
Next post ಮುಳ್ಳು ಗುಲಾಬಿಯ ಮಧ್ಯೆ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…