ಯಾವ ಕ್ಷಣದಲಿ ಯಾರೋ

ಯಾವ ಕ್ಷಣದಲಿ ಯಾರೋ

ಯಾರೂ ಅರಿಯದ ಊರಲಿ ಕರೆದು
ಮಾತಾಡಿಸಿದವರು ಯಾರೋ
ಬಾಯಾರಿದ ವೇಳೆಯಲಿ
ನೀರೂಡಿಸಿದವರು ಯಾರೋ
ಯಾವ ಕ್ಷಣದಲಿ ಯಾರೋ

ನಡೆ ತಪ್ಪಿ ಬಿದ್ದಾಗ
ಹಿಡಿದೆತ್ತಿದವರು ಯಾರೋ
ಬೇಸರದಿ ಅಲೆಯುತಿದ್ದಾಗ
ಕೆಲಸ ನೀಡಿದವರು ಯಾರೋ

ಪ್ರೀತಿಗಾಗಿ ಪರಿತಪಿಸುತ್ತಿದ್ದಾಗ
ಪ್ರೀತಿ ತೋರಿದವರು ಯಾರೋ
ನೀತಿಗೆಟ್ಟು ವರ್‍ತಿಸುತಿದ್ದಾಗ
ತಿಳಿಹೇಳಿದವರು ಯಾರೋ

ಮನಃಕ್ಲೇಶದಲಿ ಬೇಯುತಿದ್ದಾಗ
ತಂಪರೆದವರು ಯಾರೋ
ಕುಡುಕನೊ ಕೆಡುಕನೊ ಎಂದು ಕೇಳದೆಯೆ
ಹಸ್ತ ನೀಡಿದವರು ಯಾರೋ

ಯಾವ ಕ್ಷಣದಲಿ ಯಾವ ದೇವರೊ
ದೇವರೊ ದಿಂಡಿರೂ ಕೇವಲ ಮನುಜರೊ
ಲೋಕ ಕಲ್ಯಾಣ ಕಾರಣರೊ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್
Next post ಹೋರಾಡುತ್ತೇನೆ ಶಬ್ದಗಳಿಂದ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys