ಕೆದಾರ ಮರಣಮೃದಂಗ

ದೈವ ಸನ್ನಿಧಿಯ ಚೈತನ್ಯದಲಿ
ಹಿಡಿದ ಹೂಮಾಲೆ ಧೂಪದೀಪ ಶ್ರೀಗಂಧ
ಸ್ವರ್ಗದೊಳಗೋಡಾಡಿ ದೇವಪಾದತಲದಲಿ ನಿಂತಕ್ಷಣ
ಕನಸು ನನಸಾಗಿಸಿಕೊಂಡ ಭಾವತೃಪ್ತಿ.

ಹರಹರ ಮಹಾದೇವ ಹರಹರ ಮಹಾದೇವ
ಪರಾತ್ಪರಾಶಿವನ ಮಂತ್ರ ಎಲ್ಲರೆದೆ ತುಂಬ
ಆ ಬೆಟ್ಟ ಈ ಬೆಟ್ಟ ಅಲ್ಲಿಯದೋ ಪ್ರಪಾತ
ಹಚ್ಚಹಸಿರು ಇಳಿಜಾರು ಅಂಕುಡೊಂಕು
ಮೋಡಮುಸುಕು ಮಳೆಯೊಳಗೆಲ್ಲ ಪ್ರತಿಧ್ವನಿ ತುಂಬಿ

ಭಾರಹೊತ್ತ ಇಳಿಸಂಜೆಗೆ ಸುಸ್ತಾಯಿತೆ?
ಇಲ್ಲವೇ ಇಲ್ಲ; ಸುತ್ತೆಲ್ಲ ದೀಪಸಾಲುಗಳು
ಝಗಮಗಿಸುವ ಜಾತ್ರಾಮೆರವಣಿಗೆ
ಘಂಟಾನಾದಕೆ ಪುರಾಣ ಪುಣ್ಯ ಎಚ್ಚೆತ್ತು

ಸಾಕ್ಷಾತ್ ಸ್ವರ್ಗ ಶಿವ ಪದತಲ
ಕಾತರದ ಮನಗಳಿಗೆ ಪುಣ್ಯ ಒಳಗಿಳಿಸಿಕೊಳ್ಳುವ ಕ್ಷಣ
ಪುಣ್ಯದ ಬೀಡು ಉಕ್ಕುಕ್ಕಿ ಹರಿವ
ಭಕ್ತರ ಭಾವನೊರೆತೊರೆ

ದೂರಬೆಟ್ಟದಾಚೆ ಅದೇನೋ ಹೊಂಚು
ಮೋಡಗಳಿಗೆ ರೆಕ್ಕೆಹೊಡೆದು ಮಳೆಯೊಳಗಿಳಿದ
ಸಂಚಿನಾ ಪಕ್ಷಿಗೆ ಕತ್ತಲೆ ಹಿತವಾಗಿ
ಅದರೊಡಲ ಸೀಳಿ ಗಕ್ಕನೆ ನೆಗೆಯಿತು ಕೆದಾರಕೊಳ್ಳಕೆ
ಬೆಚ್ಚಿಬಿದ್ದ ಬೆಟ್ಟದೊಡಲ ಗರ್‍ಭಪಾತ
ಕಲ್ಲುಮಣ್ಣು ಮರಳು ಗಿಡಮರಗಳು ಜರಿದು
ಕ್ಷಣಕ್ಷಣಕೂ ಧುಮ್ಮಿಕ್ಕಿ ಹೊರಹೊಮ್ಮಿ
ಹಿಡಿತಕೆ ಬಾರದೆ ಪ್ರಳಯತಾಂಡವ

ದೇವಸನ್ನಿಧಿಯ ಭಕ್ತರ ಧ್ವನಿ ಮಾರ್‍ಧನಿಸಿ
ಹರಹರ ಮಹಾದೇವ ಹರಹರಮಹಾದೇವ
ಕಾಪಾಡು ಮೃತ್ಯುಂಜಯ ದೈನ್ಯತೆಯ ಕೂಗು ಮತ್ತೆ
ಮತ್ತೆ ಹರಕೆಗಳೆದೆಗೆ ಮರಣಮೃದಂಗ ಸದ್ದು;
ನೋಡು ನೋಡುತಿರೆ ಮನೆಮಠಗಳು ಉರುಳಿ
ಅಲ್ಲೋಲಕಲ್ಲೋಲ ಕೊಚ್ಚಿ ಕೊಚ್ಚಿ ಹೋಗುವ ರಾಶಿರಾಶಿ ಹೆಣಗಳು.

ಅಲಕನಂದಾ ಮಂದಾಕಿನಿ ಭಾಗೀರತಿ
ಸುತ್ತಿಸುಳಿದಾಡಿ ಬಳುಕಿ ಶಿವನೊಲಿಸಲು ಸೋತರೆ?
ಕಠೋರ ಎದೆಯವನೆ ಕಲ್ಲಾಗಿ ಕುಳಿತವನೆ
ಮುಕ್ಕಣ್ಣನೆ ಕಿಚ್ಚು ರೊಚ್ಚು ಹೊತ್ತವನೆ
ವಿಜ್ಞಾನ ಜಗದ ಹಮ್ಮುಬಿಮ್ಮುಗಳಿಗೆ ಬೇಸರವಾಯಿತೆ!
ತಪಸ್ಸಿನೇಕಾಂತಕ್ಕೆ ಭಗ್ನವಾಯಿತೆ ತಂದೆ!!
ಬಾರಿಸಿಯೇ ಬಿಟ್ಟೆ ಮರಣಮೃದಂಗ

ಗಿರಿ ಕಂದರ ಕೊಳ್ಳಗಳೆದೆಗಳ ತುಂಬ
ಹೆಣಗಳ ರಾಶಿರಾಶಿ ಬೀಸಾಕಿ ತಣ್ಣಗಾದೆಯಾ ಮಹಾದೇವ
ಬಂದಿದ್ದರೆಲ್ಲ ಅವರಿಲ್ಲಿ ನಿನ್ನ ಸಾಕ್ಷಾತ್ಕಾರಕೆ
ಹಾರೈಸಿದ್ದೇನು ಶಿವನೆ
ಹೊಸಕಿ ಹೊಸಕಿ ಇಳೆಸುಡುಗಾಡಿಸಿ
ಕಣ್ರೆಪ್ಪೆ ಮುಚ್ಚಿ ಹಾಗೆಯೇ ಸ್ನಾನಕೆ ಕುಳಿತಿರುವೆ.
ಭೋರ್‍ಗರೆವ ಪ್ರಳಯರಾತ್ರಿಗೆ ಚಂದ್ರಕಾಂತನೇ…
ಭಾವಪರವಶದೊಳಗೆ ಭಜಿಸಿದ ಭಕ್ತರನು
ನಿನ್ನ ಮರಣಮೃದಂಗಕ್ಕೆ ತಾಂಡವನೃತ್ಯಕ್ಕೆ
ಎಳೆದೊಯ್ದೆಯೋ;
ನೀನೇ ಹುಚ್ಚೆದ್ದು ಕುಣಿದು
ಕಿಚ್ಚು ಶಮನಿಸಿಕೊಂಡೆಯೋ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಂಡು
Next post ರಂಗಣ್ಣನ ಕನಸಿನ ದಿನಗಳು – ೨೧

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys