ಮಣ್ಣು

ನಾನು ಭಾವ ನೀನು ಗೀತ
ನಾನು ರಾಮ ನೀನು ಸೀತ
ಹೀಗೆಲ್ಲ ಹಾಡಿದ ಕವಿಗಳು ಒಂದು ದಿನ
ನಾನು ಶವ ನೀನು ಪ್ರೇತ
ಎಂದು ಸಾಯುತ್ತಾರೆ

ನಾನು ದೇವರ ಪುತ್ರ ಬನ್ನಿ ನನ್ನಡಿಯಲ್ಲಿ
ಮೋಕ್ಷದ ಹಾದಿ ಸುರಳೀತ
ಎಂದು ಸಾರಿದ ಸಾಧಕರೆಲ್ಲ
ಗೊತ್ತಿದ್ದೋ ಗೊತ್ತಿಲ್ಲದೆಯೋ
ಇನ್ನೂ ಏಳದ ಹಾಗೆ ಮಲಗಿದ್ದಾರೆ

ಅಣು ಅರಸಿದವನು, ಕೃತಕ
ಮಳೆ ಸುರಿಸಿದವನು, ವಿದ್ಯುತ್
ಒಲೆ ಉರಿಸಿದವನು
ಒಂದು ಸಲ ಅರಸಿ ಹೋಗಿದ್ದಾರೆ ಏನನ್ನೋ
ತಿರುಗಿ ಬಂದಿಲ್ಲ

ಎಲ್ಲರೂ ಕಂಡದ್ದು ಒಂದೇ ಕೊನೆ
ಹೊಡೆದವನದೊಂದೇ ಬೆಣೆ

ನಾನಿಂತ ಮಣ್ಣಲ್ಲೆಲ್ಲ ಕರಗಿದವರ ಕತೆ
ಒಂದು ನರಿಯಂತೆ ಮತ್ತೊಂದು ಹುಲಿಯಂತೆ
ಇನ್ನೊಂದು ಬೀದಿ ನಾಯಿಯಂತೆ
ಎಲ್ಲಾ ಕೂಡಿ
ನಮ್ಮ ಮನೆಯಂಗಳಕ್ಕೆ ಮಣ್ಣಾದವಂತೆ

ಒಬ್ಬ ಮಾಸ್ತರನಂತೆ
ಉಣ್ಣದೇ ಸತ್ತವನು
ಒಬ್ಬ ಕಾರಕೂನನಂತೆ
ಹೊಟ್ಟೆ ತುಂಬಿಯೇ ಸತ್ತವನು

ಇದ್ದಾಗ ಒಬ್ಬರ ಮುಖ
ಇನ್ನೊಬ್ಬರಿಗಾಗದು
ಅವನ ಬಯ್ಯದೇ ಇವಗೆ
ಹೊತ್ತೇ ಹೋಗದು

ಇಬ್ಬರೂ ಸೇರಿ
ಚೌತಿಯ ಗಣಪತಿಗೆ
ಆಕಾರವಾದರು

ಮಣ್ಣ ಹಣತೆಯದೊಂದು ಕತೆ
ಮಡಕೆಯದೊಂದು ನೀಳ್ಗತೆ
ಹೊಸ ಮನೆಯ ಗೋಡೆಯದೊಂದು
ಕಾದಂಬರಿಯೇ ಇದೆ

ಕೇಳುತ್ತ ದಂಗಾದೆ
ಬೆರಳು ಕಚ್ಚಿದೆ ಆಶ್ಚರ್ಯಕ್ಕೆ
ಥೂ ! ಥೂ !
ಉಗಿದೆನು ಬರೀ ಮಣ್ಣು !
ಇಡೀ ಮೈ ನಕ್ಕಿತು ಒಳಗಿನವನನ್ನು ನೋಡಿ
“ನಾನು ನಿನಗಿಂತ ಹಿಂದೆ
ಸತ್ತವರ ಬೂದಿ”

ತಾಳಲಾರದೇ ಮನಸ್ಸಿನ
ಸ್ವಾಸ್ಥ್ಯಕ್ಕೆಂದು
ಮೆಲ್ಲಗೆ ಪಕ್ಕದ ಮನೆಯ
ಹುಡುಗಿಯನ್ನೆತ್ತಿಕೊಂಡೆ
ಎತ್ತಿಕೊಂಡರೆ ಪೂರಾ ಮಣ್ಣಿನದೆ ವಾಸನೆ
ಮೂಗೊತ್ತಿಕೊಂಡೆ

ಪೇಟೆಯಲ್ಲೆಲ್ಲ ಮಣ್ಣಿನದೆ ಮೆರವಣಿಗೆ
ಕ್ಲಾಸಿನಲ್ಲೆಲ್ಲ ಮಣ್ಣಿನದೆ ಬರವಣಿಗೆ
ಮಣ್ಣಿಗೆ ಮಣ್ಣು ಗೋಪುರ ಕಟ್ಟುತ್ತ

ಚೌತಿಯ ಗಣಪತಿ
ಈಶ್ವರ ಕೆರೆಯ ನೀರಲ್ಲಿ
ಹಗು-ಹಗೂರ
ಕರಗುವ ಹಾಗೆ

ನನ್ನೊಳಗೆ ಕರಗುತ್ತಿದ್ದೆ
ಮಣ್ಣಿನ ಮುದ್ದೆ

ಸತ್ತವರ ನೆರಳುಗಳಲ್ಲಿ
ಇದ್ದವರ ಕೊರಳು
ಕೊರೆಯುವ ಗೆದ್ದಲಗಳಲ್ಲಿ
ಬೀಳುತ್ತೆ ಉರುಳು

ಬಜಾರಿನ ತರಕಾರಿ, ಬಜಾರಿಯ ಚಿನ್ನಾಭರಣ
ಈ ಪ್ರಯೋಗಾಲಯದ ಗಾಜಿನುಪಕರಣ
ಜೊತೆಯಲ್ಲಿ ನಾನೂ, ನೀವೂ
ಮಾನವ ಕುಲದ
ಇತಿಹಾಸದಶ್ವತ್ಥ ಮರದಡಿಗೆ
ಮಣ್ಣಲ್ಲಿ ಮಣ್ಣಾಗಿ ಕರಗುವ ಕತೆಯೇ
ಇಂದಿನೀ ಉಸಿರು
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಟ್ಟಗಳ ನಡುವಲಿ
Next post ಬಾಳ ಕಥೆ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys