Home / ಕವನ / ಕವಿತೆ / ಮನಸೇಽ

ಮನಸೇಽ

ಗೊಂದಲಗೂಡು ನರಕಸದೃಶ
ವಿಷಾನಿಲದಿಂದಾವೃತ್ತ ಭೂಮಂಡಲ ಮಧ್ಯದೊಳು
ಶಾಂತಿಬಯಸಿ ಮುಕ್ತಿಹುಡುಕುತ ಸುಳಿದಾಡಿ ಸುತ್ತಿ
ಬಸವಳಿಯುವ ಮನಸೇ
ಸುಮ್ಮನೊಮ್ಮೆ ಕೂಡು ಸಮುದ್ರದಂಡೆಯ ಮೇಲೆ

ಕಣ್ಣಾಡಿಸು ಸುತ್ತಮುತ್ತೆಲ್ಲ
ಮರಳು ಚಿಪ್ಪು ವಿಶಾಲ ಸಮುದ್ರದಲೆಗಳು
ನೋಡು ದೂರದಿಗಂತದೆಡೆಗೆ
ಸೂರ್‍ಯ ನಕ್ಕು ಮುಕ್ಕಳಿಸಿದ ಬಂಗಾರ ನೀರಿನಲೆಗಳ
ನಡುವೆ ತೇಲುವ ಹಾಯಿ ದೋಣಿಗಳ;

ಕಾಣದಿರಲಿ ಮರಳ ಮೇಲಿನ ಕಸಕಡ್ಡಿ
ಬೆನ್ನಹಿಂದಿನ ಎತ್ತರೆತ್ತದ ಜಂಬದ
ಮನೆಗಳ ಪಗಡೆಯಾಟದ ನೋಟ.

ಸುತ್ತಾಡಿ ನಗರ ಪ್ರದಕ್ಷಿಣೆ ಮಾಡು ಮನಸೇ
ಸಂಪಿಗೆ ಗುಲಾಬಿ ಪಾರಿಜಾತ ಹೂಗಿಡಮರ
ಬಳ್ಳಿಗಳ ಪರಿಮಳ ಆಸ್ವಾದಿಸು
ಸ್ವಲ್ಪ ಉಸಿರು ಬಿಗಿಹಿಡಿ ಚರಂಡಿ ತಿಪ್ಪೆಗಳೂ ಇವೆ
ಕಣ್ಣಿಗೆ ಒಳಪರದೆ ಬೀಳಲಿ ಜನ ಕಾಣದಿರಲಿ.

ನಿರಮ್ಮಳವಾಗಿ ಹಣೆಗಂಟು ಇಳಿಸು ಮನಸೇ
ಜೋಲು ಮುಖ ಎತ್ತಿ ನಗೆಹೊತ್ತು
ಸುತ್ತೆಲ್ಲ ನೋಡು ಇದು ನಿನ್ನದೇ ನಾಡು ನುಡಿ
ನಿನ್ನವರೇ ಸಂಬಂಧಿಗಳ ಕಲರವ
ಮುದ್ದಿಡುತಿದೆ ನಾಯಿ ನಿನ್ನ ಕಾಲಿಗೆ
ನಗು ರಿಂಗಣಿಸಲಿ; ಕಿವಿಗೆ ಬಿಡು ಎಣ್ಣೆ.

ಸುಮ್ಮನೆ ಕೂಡು ದೀಪದ ಬೆಳಕಿನ ದೇವನೆದುರಲಿ
ನೋಡು ಅವನ ಕಣ್ಣಲಿ ಮಿಂಚುನಗು
ತುಟಿಯಲ್ಲಿಯ ತುಂಟನಗು ಮುಡಿಗೇರಿಸಿದ ಹೂವು
ಮುಗ್ಧ ಮೊಲ, ಪುಣ್ಯಕೋಟಿ ಗೋವು;
ಕಾಣಿಸಿದರೆ ಕಾಣಿಸಲಿ ಅವನ ಸುತ್ತ ತುಂಬಿರುವ
ಹುಲಿ ಹಾವು ಕೀಟಗಳ ಹರಿದಾಟ
ನಡುವೆ ಪ್ರಶಾಂತ ಚಿತ್ಕಳೆಯ ಸಾಕಾರ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...