ಅಪ್ಸರೆಯ ಅಳಲು

ಚಿತ್ತ ಚಿತ್ತಾರದ ಭಾವಭಂಗಿಯಲಿ
ಸೆಳವಿಗೆದುರಾಗಿ ಬಿಂಕಬಿನ್ನಾಣಗಳಲಿ ಸುಳಿದಾಡಿ
ಮೇಲೇರಿ ಇಳಿಜಾರಕೆ ತೇಲಿಬಿದ್ದು
ಒಡಲಾಳಸೇರಿ ಕ್ಷಣಾರ್ಧದಲಿ ನೆಗೆದು
ತನ್ನೊಳಗೇ ಸ್ವರ್‍ಗ ಇಳಿಸಿಕೊಂಡು
ಕಣ್ಮನ ಸೆಳೆವ ಅಪ್ಸರೆ

ಹಂಗಿನರಮನೆಯ ಅಕ್ವೇರಿಯಂನೊಳಗೆ ಹೊರಳಾಟ
ಶುದ್ಧನೀರು ಗಾಳಿ ಉದುರಿಸಿದ ಪುಡಿಯೂಟ
ಸಹಜ ತೇಲುವಿಕೆಗೆ ಬಿಗಿಜಡತ್ವ
ಚೆಲ್ಲಾಟ ಚಿನ್ನಾಟಕೆ ಬೇಲಿ

ಪಿಳಿಪಿಳಿ ಕಣ್ಣುಬಿಟ್ಟದ್ದೂ ಕಣ್ಣೀರಿಟ್ಟದ್ದೂ
ನೀರೊಳಗೆ ಇಂಗಿಹೋಗಿ ಕೇಳಿಸದಂತೆ
ಕಾಣಿಸದಂತೆ ಅದೃಶ್ಯ
ಮಾತುಮೌನ ನಿರ್ಲಿಪ್ತ ಆವರಣ

ಬರುವೆಯಾ ಸೂರ್‍ಯ ಚಂದ್ರ ನೀನಾದರೂ ಬಾ
ಹಗಲುರಾತ್ರಿ ಹಂಬಲಿಸಿದ ಎದೆಗೂಡು ನಿಶ್ಯಬ್ದ…
ಅಪರಂಜಿ ಅರಮನೆಯ ಚೌಕಟ್ಟಿನೊಳಹೊರಗೆಲ್ಲ
ದೀಪಗಳ ಸರಮಾಲೆ ಮನದಾಳ ಕತ್ತಲೆಯ ಗೂಡು
ನೋವು ಹತಾಷೆ ಮಡುಗಟ್ಟಿ
ಕಣ್ಣುರೆಪ್ಪೆ ಮುಚ್ಚಿದರೂ ಒತ್ತಿದರೂ
ನಿದ್ದೆಯ ಸುಳುವಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೨೬
Next post ಕಳ್ಳರ ಕೂಟ – ೩

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys