ಲಯ

ಸೃಷ್ಟಿ ಚೈತನ್ಯಮೂಡಿ ಕಣಕಣವೂ ಚಿಗುರೊಡೆದು
ಮೈತುಂಬಾ ಬಂಗಾರ ಹುಡಿ
ಅಂಕುಡೊಂಕು ಗುಡ್ಡ ಬೆಟ್ಟ ಕೊಳ್ಳಗಳ
ಗೋಜಲು ಗದ್ದಲಗಳ ದಾಟಿ ಸುಳಿದಾಡಿ
ನಿರುಮ್ಮಳ ಹರಿವ ಜೀವನ್ಮುಖಿ
ಹೊಲಗದ್ದೆ ಹಸಿರು ಹೂಗಳ ಮೇಲೆಲ್ಲ ಇಬ್ಬನಿ
ಕೋಶ ಒಡೆದು ಹೊರಬಂದ ಚಿಟ್ಟೆ
ರೆಕ್ಕೆ ಬಿಚ್ಚಿ ಹಾರಾಡಿ ಹುಳ ಹುಪ್ಪಡಿ
ಅಳಿಲು ಕೋಗಿಲೆ ಗುಬ್ಬಚ್ಚಿಗಳ ಚಿಲಿಪಿಲಿಯಲಿ

ಸೃಷ್ಟಿಯ ಪರಾಕು ಮೈತುಂಬಾ ಬಣ್ಣ.
ಬಿಳಿ ಪುಟಗಳ ಮೇಲೆಲ್ಲ ಅಕ್ಷರಗಳ ಆಟ
ಎದೆಯಿಂದ ಎದೆಗೆ ಭಾವನೆಗಳ ಓಡಾಟ
ಮುಖ ತುಂಬ ಮಂದಸ್ಮಿತ
ದೇವರಿದ್ದಾನೆ ಇಲ್ಲೆಲ್ಲೊ

ಮಾತಿಗಿಳಿದು ಕೈಹಿಡಿದೊಯ್ಯುತ್ತಾನೆ ಎಲ್ಲೆಲ್ಲೊ!
ಕರೆದೆಡೆ ಹೋಗದಿರುವುದೇ ಹೇಳಿ?
ಸುಖ ದುಃಖಗಳಿಗೆ ಭಾಗಿಯಾಗಿಸುತ
ತನ್ನೆಡೆಗೆ ಎಳೆಯುವ ರೀತಿಗೆ
ಆಕಾಶ ಸಾಕ್ಷಿ ದೂರ ದೂರ ಕ್ಷಿತಿಜ
ನಮ್ಮೊಳಗಿನ ಪ್ರತಿಫಲನಕೆ ಸಮುದ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶರೀರ
Next post ಕಳ್ಳರ ಕೂಟ – ೪

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…