Home / ಕವನ / ಕವಿತೆ / ಮುಖವಾಡಗಳು

ಮುಖವಾಡಗಳು

ಜನ್ಮ ಜನ್ಮಾಂತರದ ಶಾಪ ನಿಮಗಂಟಿದೆ
ಬೇಡವೆ ನಿಮಗೆ ಪರಿಹಾರ?
ನೋಡಿಲ್ಲಿ ನೋಡಲ್ಲಿ ಮೃತ್ಯುವಿನ ದೂತ
ಕಾಯುತಿರುವ ನಿಮ್ಮ ಮನೆಯ
ಮುಂಬಾಗಿಲು ಹಿಂಬಾಗಿಲು-

ಶಕುನ ಜಾತಕ ಜ್ಯೋತಿಷಿಗಳು
ಕಾಲಜ್ಞಾನಿ ಸಂಖ್ಯಾಶಾಸ್ತ್ರ ವಾಸ್ತುದವರು
ದಿನ ಬೆಳಗಾದರೆ ಗಂಟಲು ಕಿರುಚಿ ಹೇಳಿ ಹೇಳಿ
ಹೆದರಿಸಿ ಎದೆಯೊಡೆಸಿ ಸಾಯಿಸುತಿಹರು ಮುಗ್ಧರ-

ಮತ್ತೆ ಪರಿಹಾರಕೆ ಅವರೇ ದಾಳಗಳನೆಸೆದು
ಕತ್ತಲೆಕೋಣೆಗೆ ಹೊಗೆಹಾಕಿ ದೇವರೆ ಬಂದಿಹನಿಲ್ಲಿ
ಮಾತನಾಡುವನು ನಿಮ್ಮೊಂದಿಗೆ ಭಯ ಬೀಳದಿರಿ
ನೋಡಿ ನೋಡಿ ಕೇಳಿ ಭಕ್ತರೆ ಭಕ್ತಿ ಇರಲಿ…
ಮುಖವಾಡ ಸ್ವಾಮಿಗಳ
ಒಳಗೊಳಗೇ ನಗು ಹಣದ ಚೀಲ ಝಣಝಣ.

ಮಾಟಮಂತ್ರ ವಶೀಕರಣ ನರಬಲಿ ಪ್ರಾಣಿಬಲಿ
ಹರಕೆ ಮಡೆಸ್ನಾನ ಪಂಕ್ತಿಭೇದ ದೇವದಾಸಿ
ಬೆತ್ತಲಸೇವೆ ಪಾದಪೂಜೆ ಅಡ್ಡಪಲ್ಲಕ್ಕಿ
ಆಹಾ! ಒಂದೇಽ ಎರಡೇಽ ಇವರ
ನಂಬಿಕೆ ಬಿಂಬಿಸುವ ಹುನ್ನಾರ.

ಅಯ್ಯೋ ದುರ್‍ಭಾಗ್ಯ ದೇಶವೆ
ಎಷ್ಟೊಂದು ನರಳುವಿಕೆ ಅಂಧಕಾರ
ಹುಣ್ಣಿಮೆಯ ಬೆಳಕಿನಲ್ಲೂ ಅಮವಾಸ್ಯೆ ಕತ್ತಲೆಯೆನುತ
ಭೂತಪ್ರೇತಗಳೆಂದು ಅರಿಷಿಣ ಕುಂಕುಮ ಎರಚುವವರು-
ರಾಜಕೀಯ ಖುರ್ಚಿಗೂ ಬಲಿ; ಉರುಳಿಸಲೂ ಬಲಿ
ಕುರಿ ಕೋಳಿ ಹಸು ಕಾಡೆಮ್ಮೆ ಸಾಕಿಲ್ಲ ಇವಕೆ
ಹಸುಗೂಸು ಕಂದಮ್ಮಗಳು ಬೇಕಿವಕೆ
ತಪ್ಪಿದರೆ ಕಂಠಕೆ ಬೆಚ್ಚಿಬೀಳಿಸುವ ಹುನ್ನಾರ.

ಗೂಬೆ ಗೂಗೂ ಅಂದರೊಂದು ಕಾಗೆ ಕಾಕಾ ಅಂದರೊಂದು
ಹಲ್ಲಿ ಲೊಚಗುಟ್ಟಿದರೊಂದು ಬೆಕ್ಕು ದಾಟಿದರೊಂದು
ಅಪಶಕುನದ ಮಾತೆತ್ತಿ ಸಾಯಿಸುವ ಪಾತಕಿಗಳು.

ಬಣ್ಣದ ವೇಷಗಳ ಭಯಂಕರ ಮುಖವಾಡಗಳು
ಕಳಚಿ ಬೀಳಲಿ ಮಾನವೀಯತೆ ಮೆರೆಯಲಿ…
ಚಿಂತನ ಮಂಥನಗಳಿಗೆ ಹೆದ್ದಾರಿಯಾಗಲಿ…
ಮನುಜರಾಗಲಿ ವಿಶ್ವಾಸಬೆಳೆಸಲಿ.
*****
೧. ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಬಂದ ವಿಷಯ: ಇದರ ಬಗೆಗೆಯೇ ಒಂದು ಕರಡು ರಚನಾ ಸಮಿತಿ ಮಾಡಬೇಕೆನ್ನುವ ಒತ್ತಾಯ-೨೫ ನವೆಂಬರ್ ೨೦೧೩
೨. ಮೂಢನಂಬಿಕೆಯವರು ವಿಚಾರವಾದಿಗಳಾದ ಮಹಾರಾಷ್ಟ್ರದ ನರೇಂದ್ರ ದಾಬೋಲಕರ್, ಗುಲ್ಬರ್ಗದ ಲಿಂಗಣ್ಣ ಸತ್ಯಂಪೇಟೆ, ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ಅವರನ್ನು ಕೊಂದರು.
೩ ಸರಕಾರಕ್ಕೆ ಮಾಡಬೇಕಾದಂತಹ ಅನೇಕ ಕೆಲಸಗಳಿವೆ: ಕೃಷಿಸಮಸ್ಯೆ, ನೆಲ, ಜಲ, ಮಹಿಳೆ, ಮಕ್ಕಳು, ಶಿಕ್ಷಣ, ಯುವಕರಿಗೆ ಉದ್ಯೋಗ, ವೃದ್ಧರ ಸಮಸ್ಯೆ ಮುಂತಾದವುಗಳು. ಸುಮ್ಮನೆ ಎಲ್ಲರ ಸಮಯ ಹಾಳು + ದುಡ್ಡುದಂಡ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...