Home / ಕವನ / ಕವಿತೆ / ಮುಖವಾಡಗಳು

ಮುಖವಾಡಗಳು

ಜನ್ಮ ಜನ್ಮಾಂತರದ ಶಾಪ ನಿಮಗಂಟಿದೆ
ಬೇಡವೆ ನಿಮಗೆ ಪರಿಹಾರ?
ನೋಡಿಲ್ಲಿ ನೋಡಲ್ಲಿ ಮೃತ್ಯುವಿನ ದೂತ
ಕಾಯುತಿರುವ ನಿಮ್ಮ ಮನೆಯ
ಮುಂಬಾಗಿಲು ಹಿಂಬಾಗಿಲು-

ಶಕುನ ಜಾತಕ ಜ್ಯೋತಿಷಿಗಳು
ಕಾಲಜ್ಞಾನಿ ಸಂಖ್ಯಾಶಾಸ್ತ್ರ ವಾಸ್ತುದವರು
ದಿನ ಬೆಳಗಾದರೆ ಗಂಟಲು ಕಿರುಚಿ ಹೇಳಿ ಹೇಳಿ
ಹೆದರಿಸಿ ಎದೆಯೊಡೆಸಿ ಸಾಯಿಸುತಿಹರು ಮುಗ್ಧರ-

ಮತ್ತೆ ಪರಿಹಾರಕೆ ಅವರೇ ದಾಳಗಳನೆಸೆದು
ಕತ್ತಲೆಕೋಣೆಗೆ ಹೊಗೆಹಾಕಿ ದೇವರೆ ಬಂದಿಹನಿಲ್ಲಿ
ಮಾತನಾಡುವನು ನಿಮ್ಮೊಂದಿಗೆ ಭಯ ಬೀಳದಿರಿ
ನೋಡಿ ನೋಡಿ ಕೇಳಿ ಭಕ್ತರೆ ಭಕ್ತಿ ಇರಲಿ…
ಮುಖವಾಡ ಸ್ವಾಮಿಗಳ
ಒಳಗೊಳಗೇ ನಗು ಹಣದ ಚೀಲ ಝಣಝಣ.

ಮಾಟಮಂತ್ರ ವಶೀಕರಣ ನರಬಲಿ ಪ್ರಾಣಿಬಲಿ
ಹರಕೆ ಮಡೆಸ್ನಾನ ಪಂಕ್ತಿಭೇದ ದೇವದಾಸಿ
ಬೆತ್ತಲಸೇವೆ ಪಾದಪೂಜೆ ಅಡ್ಡಪಲ್ಲಕ್ಕಿ
ಆಹಾ! ಒಂದೇಽ ಎರಡೇಽ ಇವರ
ನಂಬಿಕೆ ಬಿಂಬಿಸುವ ಹುನ್ನಾರ.

ಅಯ್ಯೋ ದುರ್‍ಭಾಗ್ಯ ದೇಶವೆ
ಎಷ್ಟೊಂದು ನರಳುವಿಕೆ ಅಂಧಕಾರ
ಹುಣ್ಣಿಮೆಯ ಬೆಳಕಿನಲ್ಲೂ ಅಮವಾಸ್ಯೆ ಕತ್ತಲೆಯೆನುತ
ಭೂತಪ್ರೇತಗಳೆಂದು ಅರಿಷಿಣ ಕುಂಕುಮ ಎರಚುವವರು-
ರಾಜಕೀಯ ಖುರ್ಚಿಗೂ ಬಲಿ; ಉರುಳಿಸಲೂ ಬಲಿ
ಕುರಿ ಕೋಳಿ ಹಸು ಕಾಡೆಮ್ಮೆ ಸಾಕಿಲ್ಲ ಇವಕೆ
ಹಸುಗೂಸು ಕಂದಮ್ಮಗಳು ಬೇಕಿವಕೆ
ತಪ್ಪಿದರೆ ಕಂಠಕೆ ಬೆಚ್ಚಿಬೀಳಿಸುವ ಹುನ್ನಾರ.

ಗೂಬೆ ಗೂಗೂ ಅಂದರೊಂದು ಕಾಗೆ ಕಾಕಾ ಅಂದರೊಂದು
ಹಲ್ಲಿ ಲೊಚಗುಟ್ಟಿದರೊಂದು ಬೆಕ್ಕು ದಾಟಿದರೊಂದು
ಅಪಶಕುನದ ಮಾತೆತ್ತಿ ಸಾಯಿಸುವ ಪಾತಕಿಗಳು.

ಬಣ್ಣದ ವೇಷಗಳ ಭಯಂಕರ ಮುಖವಾಡಗಳು
ಕಳಚಿ ಬೀಳಲಿ ಮಾನವೀಯತೆ ಮೆರೆಯಲಿ…
ಚಿಂತನ ಮಂಥನಗಳಿಗೆ ಹೆದ್ದಾರಿಯಾಗಲಿ…
ಮನುಜರಾಗಲಿ ವಿಶ್ವಾಸಬೆಳೆಸಲಿ.
*****
೧. ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಬಂದ ವಿಷಯ: ಇದರ ಬಗೆಗೆಯೇ ಒಂದು ಕರಡು ರಚನಾ ಸಮಿತಿ ಮಾಡಬೇಕೆನ್ನುವ ಒತ್ತಾಯ-೨೫ ನವೆಂಬರ್ ೨೦೧೩
೨. ಮೂಢನಂಬಿಕೆಯವರು ವಿಚಾರವಾದಿಗಳಾದ ಮಹಾರಾಷ್ಟ್ರದ ನರೇಂದ್ರ ದಾಬೋಲಕರ್, ಗುಲ್ಬರ್ಗದ ಲಿಂಗಣ್ಣ ಸತ್ಯಂಪೇಟೆ, ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ಅವರನ್ನು ಕೊಂದರು.
೩ ಸರಕಾರಕ್ಕೆ ಮಾಡಬೇಕಾದಂತಹ ಅನೇಕ ಕೆಲಸಗಳಿವೆ: ಕೃಷಿಸಮಸ್ಯೆ, ನೆಲ, ಜಲ, ಮಹಿಳೆ, ಮಕ್ಕಳು, ಶಿಕ್ಷಣ, ಯುವಕರಿಗೆ ಉದ್ಯೋಗ, ವೃದ್ಧರ ಸಮಸ್ಯೆ ಮುಂತಾದವುಗಳು. ಸುಮ್ಮನೆ ಎಲ್ಲರ ಸಮಯ ಹಾಳು + ದುಡ್ಡುದಂಡ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...