ಬಂತಿದೋ ಸಂಕ್ರಾಂತಿ

ಇದು ಉತ್ತರಾಯಣದ ಪುಣ್ಯಕಾಲ
ಚಳಿಯಿಂದೆದ್ದ ಸೂರ್‍ಯ ಮಗ್ಗಲು ಹೊರಳಿಸಿ
ಹೊದಿಕೆ ಸರಿಸಿ ಬಿರುಸು ಹೆಜ್ಜೆ ಇಟ್ಟು
ಉದ್ದುದ್ದ ಕೋಲು ಚೆಲ್ಲುತ ಬರುವ
ಸಂಕ್ರಾಂತಿ ಕಾಲ-

ಚಳಿಯ ಬೀಡಿ ಹೊರಗೆಸೆದು ಎಳೆ ಬಿಸಿಲು ಹೀರಲು
ಹೊರಬಾಗಿಲು ಕಟ್ಟೆಗೆ ಬಂದು ಕೂಡುವ
ಊರುಗೋಲು ಹಿಡಿದ ಅಜ್ಜನ ಬೊಚ್ಚುನಗು;
ಮೊಮ್ಮಕ್ಕಳ ಕೈ ಹಿಡಿದು ಹಿತ್ತಲಂಗಳದ
ಬಳ್ಳಿಕಾಯಿ ಹರಿವ, ಉಡಿಯೊಳಗೆ ಮೊಮ್ಮಕ್ಕಳನು
ಆಡಿಸುತ ಚಿತ್ತಾರದ ಕೌದಿ ಹೊಲೆಯುವ
ಬೆಚ್ಚನೆಯ ನಗುವಿನ ಅಜ್ಜಿ;
ಒಲೆಯ ಮುಂದೆ ಕುಳಿತು ಪ್ರೀತಿ ಪ್ರೇಮದ
ಮುಗುಳು ನಗೆಯ ಕುಸುರೆಳ್ಳಿಗೆ
ಮತ್ತೆ ಮತ್ತೆ ಮುಳ್ಳೆಬ್ಬಿಸಿ ತುಟಿಗೊತ್ತಿಕೊಳ್ಳುವ
ಹದಿಹರೆಯದ ಸಂಭ್ರಮದ ತುಂಟು ಹುಡುಗಿಯರು –

ಹಳ್ಳ ಹೊಳೆಗಳ ಬೆಚ್ಚನೆಯ ನೀರಿನಲಿ ಮಿಂದೆದ್ದು
ಮಡಿಯುಟ್ಟು ಸುಗ್ಗಿಯ ಹೊಸ ಫಸಲು ಪೂಜಿಸುವ ಕಾಲ
ಹಬ್ಬ ಹಬ್ಬಗಳ ನೆಪಮಾಡಿ ಉಂಡುಟ್ಟು
ಸಿಹಿ ತಿಂದು ನಕ್ಕು ನಲಿದು ಆಕಾಶದಂಗಳಕೆ
ಪತಂಗ ಹಾರಿಸುವ ಗೂಡು ಹಕ್ಕಿಗಳ ಸ್ವಚ್ಛಂದದ ಕಾಲ-

ಗುಲಾಲು ಮೆತ್ತಿ ರಿಬ್ಬನ್‌ ಕಟ್ಟಿ ಎತ್ತುಗಳ ಸಿಂಗರಿಸಿ
ಕೆಂಡ ಹಾಯಿಸುವ ಚಕ್ಕಡಿ ಓಡಿಸುವ ಮೋಜಿನ ಕಾಲ
ಪಾಪ ಕರ್‍ಮಗಳ ಪ್ರಾಯಶ್ಚಿತಕೆ
ನಿಗಿನಿಗಿ ಕೆಂಡಹಾಯುವ ಪರ್‍ವಕಾಲ

ವರುಷ ವರುಷ ಸಾವಿರ ವರುಷಗಳ
ಪುರಾಣ ಇತಿಹಾಸಗಳ ಕಥೆ ಹೊತ್ತು
ರಥವೇರಿ ಬರುವ ಸೂರ್‍ಯ
ಸುಸ್ತಾಗದೆ ಸಿಟ್ಟಾಗದೆ ಮತ್ತೆ ಮತ್ತೆ
ಜಾಗತೀಕರಣದ ಸಂತೆ ಪೇಟೆಯ
ಗಂಟು ಕಟ್ಟಿಕೊಳ್ಳುತ ಭವಿಷ್ಯಕೆ ಬಿಚ್ಚಲು
ಒಮ್ಮೆ ಉತ್ತರಾಯಣ ಒಮ್ಮೆ ದಕ್ಷಿಣಾಯಣದ
ಕಾಲಚಿತ್ರ ಬಿಡಿಸುತ ಅವನೂ ನಿರಮ್ಮಳವಾಗುವ ಕಾಲ
ಇದು ಎಳ್ಳು ಬೆಲ್ಲವ ತಿಂದು ಒಳ್ಳೊಳ್ಳೆಯ
ಮಾತನಾಡುವ ಸಂಕ್ರಾಂತಿ ಕಾಲ
ಇದು ಸಂಕ್ರಾಂತಿ ಕಾಲ-
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೨೮
Next post ಕಳ್ಳರ ಕೂಟ – ೬

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys