ಅಡ್ಡಡ್ಡಲ್ಲ ಉದ್ದುದ್ದಾಗಿ
ತಲೆ ಅಲುಗಾಡಿಸುತ್ತಲೇ ಇರಬೇಕು
ನಿಲ್ಲಿಸಿದರೆ ಬಂತು ಬೆತ್ತ.
‘ಪಾಪ! ಇವಳೆಷ್ಟು ಮುಗ್ಧೆ’ ಹಾಗೇಽ ಇರಬೇಕು
ಮಾತನಾಡಿದರೆ ಮುರಿದುಬೀಳುತ್ತವೆ ಹಲ್ಲು.
ಕಣ್ಣಿಗೆ ರೆಪ್ಪೆ ಬಂದಂತೆ ನಟಿಸಬೇಕು
ವರ್ಣಿಸಿದರೆ ಬಾಸುಂಡೆಗಳು.
ಇವನೊಬ್ಬನ ಮಾತುಗಳೇ ವೇದವಾಕ್ಯಗಳು
ಬೇರೆಯವರವು ಚಿಲ್ಲರೆ ತುಕ್ಕುಹಿಡಿದವು.
ಹಸಿದ ಹುಲಿಗೆ ಮೊದಲು ತಟ್ಟೆ
ಇಡದಿರೆ ಇಡಿಯಾಗಿ ತಿನಬಹುದು ಅವಳನ್ನೇ.
ಅವಳು ಪ್ರೇಮದ ಹಸಿರು ನಿರೀಕ್ಷಿಸಿದ್ದಾದರೆ
ಕಾಮಿ ಎಂದು ಕೊಳ್ಳೆ ಇಟ್ಟು
ಕಪಾಳಮೋಕ್ಷ ಎದುರಾದೀತು.
ಮಾತು ಮಾತಿಗೆ ಸಂಶಯ ಪಿಶಾಚಿ
ಹೊರಗೆ ಸತ್ಯಹರಿಶ್ಚಂದ್ರ, ಧರ್ಮರಾಯ,
ಮಾತುಮಾತುಗಳಲಿ ಮದ್ದು ಗುಂಡುಗಳ ಸಿಡಿಸುವಿಕೆ
ನರನಾಡಿಗಳಲಿ ಬಂದೂಕು ಹೊತ್ತ
ವಸಾಹತುವೇ ತೊಲಗಿಲ್ಲಿಂದ-
ಇಲ್ಲದಿರೆ ಸಿಡಿದೇಳುವುದು ಗೊತ್ತು
ಗಾಂಧಿ ತಾತನ ಮಂತ್ರ ‘ಮಾಡು ಇಲ್ಲವೆ ಮಡಿ’.
*****
Related Post
ಸಣ್ಣ ಕತೆ
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…