ವಸಾಹತು ಸಾಮ್ರಾಜ್ಯ

ಅಡ್ಡಡ್ಡಲ್ಲ ಉದ್ದುದ್ದಾಗಿ
ತಲೆ ಅಲುಗಾಡಿಸುತ್ತಲೇ ಇರಬೇಕು
ನಿಲ್ಲಿಸಿದರೆ ಬಂತು ಬೆತ್ತ.
‘ಪಾಪ! ಇವಳೆಷ್ಟು ಮುಗ್ಧೆ’ ಹಾಗೇಽ ಇರಬೇಕು
ಮಾತನಾಡಿದರೆ ಮುರಿದುಬೀಳುತ್ತವೆ ಹಲ್ಲು.
ಕಣ್ಣಿಗೆ ರೆಪ್ಪೆ ಬಂದಂತೆ ನಟಿಸಬೇಕು
ವರ್‍ಣಿಸಿದರೆ ಬಾಸುಂಡೆಗಳು.
ಇವನೊಬ್ಬನ ಮಾತುಗಳೇ ವೇದವಾಕ್ಯಗಳು
ಬೇರೆಯವರವು ಚಿಲ್ಲರೆ ತುಕ್ಕುಹಿಡಿದವು.
ಹಸಿದ ಹುಲಿಗೆ ಮೊದಲು ತಟ್ಟೆ
ಇಡದಿರೆ ಇಡಿಯಾಗಿ ತಿನಬಹುದು ಅವಳನ್ನೇ.
ಅವಳು ಪ್ರೇಮದ ಹಸಿರು ನಿರೀಕ್ಷಿಸಿದ್ದಾದರೆ
ಕಾಮಿ ಎಂದು ಕೊಳ್ಳೆ ಇಟ್ಟು
ಕಪಾಳಮೋಕ್ಷ ಎದುರಾದೀತು.
ಮಾತು ಮಾತಿಗೆ ಸಂಶಯ ಪಿಶಾಚಿ
ಹೊರಗೆ ಸತ್ಯಹರಿಶ್ಚಂದ್ರ, ಧರ್ಮರಾಯ,
ಮಾತುಮಾತುಗಳಲಿ ಮದ್ದು ಗುಂಡುಗಳ ಸಿಡಿಸುವಿಕೆ
ನರನಾಡಿಗಳಲಿ ಬಂದೂಕು ಹೊತ್ತ
ವಸಾಹತುವೇ ತೊಲಗಿಲ್ಲಿಂದ-
ಇಲ್ಲದಿರೆ ಸಿಡಿದೇಳುವುದು ಗೊತ್ತು
ಗಾಂಧಿ ತಾತನ ಮಂತ್ರ ‘ಮಾಡು ಇಲ್ಲವೆ ಮಡಿ’.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ಪಂಜ್ ನೆಲ
Next post ತಿಮ್ಮ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…