Home / ಕವನ / ಕವಿತೆ / ನನಗೆ ತಿಳಿಯದ ಗಣಿತ

ನನಗೆ ತಿಳಿಯದ ಗಣಿತ

ಒಂದು ಎರಡು ಮೂರು, (a + b)2 ತೀಟಾ, ತ್ರಿಕೋನ. ಕರ್ಣ ವಿಕರ್ಣ.
ಇವುಗಳ ಸುತ್ತವೇ ಸುತ್ತುವ ಜ್ಞಾನೀ.
ಪೇಪರ್ ತುಂಬಿದವು ; ಕೈ ಮಸಿಯಾಯ್ತು; ಶಾಯಿ ಖರ್ಚಾಯ್ತು
ನಿನ್ನ ಲೆಕ್ಕ ಮುಗಿಯುವುದು ಯಾವಾಗ ?

ಲೆಕ್ಕ ಮಾಡುತ್ತೀಯ ?
ನಿನ್ನಪ್ಪನ ಪಗಾರೆಷ್ಟು? ಮನೆಯ ಬಾಡಿಗೆ ಎಷ್ಟು?
ಇಲಕ್ಟ್ರಿಕ್ ಬಿಲ್ ಎಷ್ಟು ? ಕೊನೆಗೆ ಉಳಿಯುವುದೆಷ್ಟು ?
ಮಿಗಿಲಾಗಿ, ತಲೆ ತುಂಬುವ, ತಲೆ ತಿನ್ನುವ ಸಮಸ್ಯೆಗಳೆಷ್ಟು ?
ಅದಕ್ಕೆ ಪರಿಮಿತಿ ಉಂಟೆ ? ಹೇಳು- ಇತಿಮಿತಿ ಉಂಟೆ ?

ಒಮ್ಮೆ ಪೆನ್ನು ಮುಚ್ಚು, ಕಣ್ಣ ಬಿಚ್ಚು
`ಅಬ್ಬ ! ಆಹಾ’ ಆಕಾಶ ನೋಡು – ಈ ಭೂಮಿ ನೋಡು
ಎತ್ತರ ಅಳೆ- ಆಷ್ಟೆ
ಎತ್ತರ ಬೆಳೆ
ಆಕಾಶಕ್ಕೆ ಮೇರೆ ಎಲ್ಲಿ ? ನಕ್ಷತ್ರಗಳ ಸಂಖ್ಯೆ ಎಷ್ಟು ?
ಇಷ್ಟು ಸಣ್ಣ ತಲೆಯಲ್ಲಿ ಅಂಥಂಥ ಘನ ವಿಚಾರ
ಹೊಳೆಯುವುದು ಹೇಗೆ ? ಅಲ್ಲ-
ಅವೆಲ್ಲ ತುಂಬಿದ್ದು ಹೇಗೆ?
ಲೆಕ್ಕ ಸಾಧ್ಯವಿಲ್ಲ ಅದಕ್ಕೆ ಸೂತ್ರ ಇಲ್ಲ

ಇದ್ದಲ್ಲಿ
ಗುಣಿಸು ಭಾಗಿಸು
ಕೂಡು-ಕಳೆ
ಬದುಕಿ ನುತ್ತರ ಏನು?
ಗಣಿತಜ್ಞ.
ನೀನು ಇಂಥಲ್ಲಿ ನಿನ್ನ ಲೆಕ್ಕದ ಗಣಿ-ತಜ್ಞನಾಗುವುದೇ ಜಾಸ್ತಿ

ನೀನು ಬೆಟ್ಟ ಏರಲಾರೆ-ನದಿ ಇಳಿಯಲಾರೆ
ಪ್ರತಿ ದಿವಸ ಮುಳುಗುವ ಸೂರ್ಯನ ಕಿರಣ ಎಣಿಸಲಾರೆ
ತಂಗಾಳಿಯ ಪಿಸುಮಾತಿಗೆ ವ್ಯಾಖ್ಯೆ ಕೊಡಲಾರೆ

ಇವೆಲ್ಲದರ ಒಳಗೆ ಅವಿತ
ನಿನ್ನ ಸಂಖ್ಯೆಗಳು, ಎಂದೂ ಸುಳ್ಳಾಗದ ಸಿದ್ಧಾಂತ
ಪಾಪ! ನೀ ರಚಿಸುವ ವೃತ್ತದ ಪಥವೇ ನೀನು
ನೀನು ಹಾರಲಾರೆ ತಪ್ಪಿಯೂ
ಬೀಳಲಾರೆ

ಒಂದು ಭಾಗಿಲೆ ಝೀರೋ (೧/೦)
ಝೀರೋ ಭಾಗಿಲೆ ಝೀರೋ (೦/೦)
ಉತ್ತರ ಎಷ್ಟು ?
ನಿನ್ನ ಲೆಕ್ಕ ಮುಗಿಯುವುದಿಲ್ಲ
ಅಸಂಬದ್ಧ-ಅನಿಶ್ಚಿತ-ಅನಂತ
ಹೊರಗೆ ಬರದ ನಿನ್ನ ಲೆಕ್ಕಾಚಾರ
ನನಗೆ ನಿರ್ಜೀವ – ಪೂರ ನಿಶ್ಚೇತ
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...