Home / ಕವನ / ಕವಿತೆ / ನನಗೆ ತಿಳಿಯದ ಗಣಿತ

ನನಗೆ ತಿಳಿಯದ ಗಣಿತ

ಒಂದು ಎರಡು ಮೂರು, (a + b)2 ತೀಟಾ, ತ್ರಿಕೋನ. ಕರ್ಣ ವಿಕರ್ಣ.
ಇವುಗಳ ಸುತ್ತವೇ ಸುತ್ತುವ ಜ್ಞಾನೀ.
ಪೇಪರ್ ತುಂಬಿದವು ; ಕೈ ಮಸಿಯಾಯ್ತು; ಶಾಯಿ ಖರ್ಚಾಯ್ತು
ನಿನ್ನ ಲೆಕ್ಕ ಮುಗಿಯುವುದು ಯಾವಾಗ ?

ಲೆಕ್ಕ ಮಾಡುತ್ತೀಯ ?
ನಿನ್ನಪ್ಪನ ಪಗಾರೆಷ್ಟು? ಮನೆಯ ಬಾಡಿಗೆ ಎಷ್ಟು?
ಇಲಕ್ಟ್ರಿಕ್ ಬಿಲ್ ಎಷ್ಟು ? ಕೊನೆಗೆ ಉಳಿಯುವುದೆಷ್ಟು ?
ಮಿಗಿಲಾಗಿ, ತಲೆ ತುಂಬುವ, ತಲೆ ತಿನ್ನುವ ಸಮಸ್ಯೆಗಳೆಷ್ಟು ?
ಅದಕ್ಕೆ ಪರಿಮಿತಿ ಉಂಟೆ ? ಹೇಳು- ಇತಿಮಿತಿ ಉಂಟೆ ?

ಒಮ್ಮೆ ಪೆನ್ನು ಮುಚ್ಚು, ಕಣ್ಣ ಬಿಚ್ಚು
`ಅಬ್ಬ ! ಆಹಾ’ ಆಕಾಶ ನೋಡು – ಈ ಭೂಮಿ ನೋಡು
ಎತ್ತರ ಅಳೆ- ಆಷ್ಟೆ
ಎತ್ತರ ಬೆಳೆ
ಆಕಾಶಕ್ಕೆ ಮೇರೆ ಎಲ್ಲಿ ? ನಕ್ಷತ್ರಗಳ ಸಂಖ್ಯೆ ಎಷ್ಟು ?
ಇಷ್ಟು ಸಣ್ಣ ತಲೆಯಲ್ಲಿ ಅಂಥಂಥ ಘನ ವಿಚಾರ
ಹೊಳೆಯುವುದು ಹೇಗೆ ? ಅಲ್ಲ-
ಅವೆಲ್ಲ ತುಂಬಿದ್ದು ಹೇಗೆ?
ಲೆಕ್ಕ ಸಾಧ್ಯವಿಲ್ಲ ಅದಕ್ಕೆ ಸೂತ್ರ ಇಲ್ಲ

ಇದ್ದಲ್ಲಿ
ಗುಣಿಸು ಭಾಗಿಸು
ಕೂಡು-ಕಳೆ
ಬದುಕಿ ನುತ್ತರ ಏನು?
ಗಣಿತಜ್ಞ.
ನೀನು ಇಂಥಲ್ಲಿ ನಿನ್ನ ಲೆಕ್ಕದ ಗಣಿ-ತಜ್ಞನಾಗುವುದೇ ಜಾಸ್ತಿ

ನೀನು ಬೆಟ್ಟ ಏರಲಾರೆ-ನದಿ ಇಳಿಯಲಾರೆ
ಪ್ರತಿ ದಿವಸ ಮುಳುಗುವ ಸೂರ್ಯನ ಕಿರಣ ಎಣಿಸಲಾರೆ
ತಂಗಾಳಿಯ ಪಿಸುಮಾತಿಗೆ ವ್ಯಾಖ್ಯೆ ಕೊಡಲಾರೆ

ಇವೆಲ್ಲದರ ಒಳಗೆ ಅವಿತ
ನಿನ್ನ ಸಂಖ್ಯೆಗಳು, ಎಂದೂ ಸುಳ್ಳಾಗದ ಸಿದ್ಧಾಂತ
ಪಾಪ! ನೀ ರಚಿಸುವ ವೃತ್ತದ ಪಥವೇ ನೀನು
ನೀನು ಹಾರಲಾರೆ ತಪ್ಪಿಯೂ
ಬೀಳಲಾರೆ

ಒಂದು ಭಾಗಿಲೆ ಝೀರೋ (೧/೦)
ಝೀರೋ ಭಾಗಿಲೆ ಝೀರೋ (೦/೦)
ಉತ್ತರ ಎಷ್ಟು ?
ನಿನ್ನ ಲೆಕ್ಕ ಮುಗಿಯುವುದಿಲ್ಲ
ಅಸಂಬದ್ಧ-ಅನಿಶ್ಚಿತ-ಅನಂತ
ಹೊರಗೆ ಬರದ ನಿನ್ನ ಲೆಕ್ಕಾಚಾರ
ನನಗೆ ನಿರ್ಜೀವ – ಪೂರ ನಿಶ್ಚೇತ
*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...