Home / ಕವನ / ಕವಿತೆ / ಗೀಜಗನ ಗೂಡು

ಗೀಜಗನ ಗೂಡು

ಸತ್ಯಾನ್ವೇಷಣೆ ಮಾಡುವುದೇ…
ಕಥೆಗಳು ರೈಲುಬಿಡುವ ಚಿತ್ರಣದೊಳಗೆ
ತನ್ನವೇ ವಜ್ರಖಚಿತ ವಸ್ತ್ರ ಒಡವೆ ನೋಡಿ
ತಾನೇ ಮುಖವಾಡವಾಗುತ
ಕಿರೀಟದೊಳಗೆ ದೇವರು ಹುದುಗಿ ಉಸಿರುಗಟ್ಟಿ
ನಡುರಾತ್ರಿಗೆ ಎದ್ದೋಡಿದ ಬಗೆಗೆ ಮೂರ್ಖನಾಗಿ
ನಿಂತಲ್ಲೇ ನಿಂತು ಯೋಗದಲಿ ತೊಡಗಿ
ಸೂರ್‍ಯಪಾನ ಚಿತ್ತಚಂಚಲವೊ
ಮತ್ತೇರಿದ ಮನದ ಗೊಂಚಲವೊ

ಗಜಿಬಿಜಿ ಗೀಜಗನ ಗೂಡಿನೊಳಹೊರಗೆ
ಕೂಡಿಸಿ ಕಳೆದು ಗುಣಿಸಿ ಭಾಗಿಸಿದ ಪರಿಗೆ
ಮೂಡಿದ ಭಿತ್ತಿಚಿತ್ರಗಳು ಹಗುರಾಗಿ ಹಾರುವ ಚಿಟ್ಟೆಗಳು
ಹಂಜಿಯಾಗಿ ತೇಲುವ ಮೋಡಗಳ ಚಿತ್ತಾಪಹಾರಕೆ
ಪ್ರಶ್ನೆ ಪ್ರಶ್ನೆ ಮೊಳಗೆ ಭಾರವೊ.

ನೆಲದಗಲ ಚಿತ್ತಚಂಚಲ ಕಲ್ಮಶಗಳ ನಿಗೂಢ
ಮೂಕವಿಸ್ಮಿತ ಮನದಬಣ್ಣಗಳ ಅಂಕುಡೊಂಕು
ಗಿರಕಿ ಹೊಡೆದು ಮುಳ್ಳಾಗಿಸುವ
ಮಗದೊಮ್ಮೆ ಮೃದುವಾಗಿಸುವ ತೆರನಕೆ
ಭಾವಚಿತ್ತದ ಸೋಪಾನ ಕಡಲತಡಿಯ ಕಂಪನಗಳ
ಉತ್ತರದಂತಹ ಪ್ರಶ್ನಾರ್ಥಕ ಪ್ರಶ್ನೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...