Home / ಕವನ / ಕವಿತೆ / ಬಯೋಡಾಟಾ ಬದಲಿಸಬೇಕಂತೆ

ಬಯೋಡಾಟಾ ಬದಲಿಸಬೇಕಂತೆ

ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ
ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ
ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ
ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ
ಮನಮೋಹಕ ಚಿತ್ತಾಕರ್‍ಷಕ
ಕ್ಯಾಲಂಡರದೊಳಗಿನ ದೃಶ್ಯಕಾವ್ಯ.

ದೇವದೇವೋತ್ತಮ ಪುರುಷೋತ್ತಮ ರಾಮನೆಂದರೆ
ರಾಜಾರಾಮ ರಘುಕುಲತಿಲಕನೆಂದರೆ
ಪಿಳಿಪಿಳಿ ಕಣ್ಣು ಹೊಸಪೀಳಿಗೆಯವುಗಳಿಗೆ
ರಾಮನವತಾರದ ಬಟ್ಟೆತೊಟ್ಟು
ಕುಸಂಬರಿ ಪಾನಕ ಸವಿದು
ದಿನದ ರಜೆ ಕಳೆದುಬಿಟ್ಟರೆ
ಹಿರಿಯರ ರಾಮನಾಮಸ್ಮರಣೆ ಏನೆಂದು
ಯಾಕೆಂದು ಗೊತ್ತಾಗದೆ ಗಲಿಬಿಲಿ.

ಭಕ್ತಿಭಾವ ನಂಬಿಕೆ ವಿಶ್ವಾಸಗಳ ಬಗೆಗೆ ಹೇಳಿದ್ದಾದರೆ
ಅದೆಂತಹ ನಾಮಬಲ, ಹೇಗಿದ್ದನಾತ
ಅವನ ಓದು ಕೆಲಸ ಹೆಂಡತಿ ಮಕ್ಕಳು ಏನೆಂದು
ನಿನ್ನ ಬಯೋಡಾಟಾ ಕೇಳುತ್ತಾರೆ ರಾಮಾ-

ಮೊದಲ ಸುತ್ತಿನ ನಿನ್ನ ಪರಿಚಯ ಕೇಳಿದ್ದೇ ಸಾಕು
ಈಗ ನೂರಾರು ಪ್ರಶ್ನೆಗಳ ಮೂಟೆಹೊತ್ತು ಬಂದಿದ್ದಾರೆ.
ದೇವನಾಗಿದ್ದರೆ…
ಗೊತ್ತಾಗಬೇಕಿತ್ತು ಮಾಯಾಜಿಂಕೆಯ ಬೆನ್ನುಹತ್ತಿ
ದಂಡಕಾರಣ್ಯದಲಿ ಸೀತೆಯನ್ನು ಬಿಟ್ಟು ಹೋದನೇಕೆ?-
ಹದಿನಾಲ್ಕು ವರ್ಷ ಮಕ್ಕಳಾಗದಂತೆ
ಅದಾವ ನಾರುಬೇರು ಕೊಟ್ಟು ಸೀತೆಗೆ ಸಮಾಧಾನಿಸಿದನಂತೆ?
ರಾವಣ, ಸೀತಾಪರಹಣ, ಮರುಪಟ್ಟಾಭಿಷೇಕ
ಅಬ್ಬಬ್ಬಾ! ಹೌದು, ಆದರೆ….
ದೇವನಾಗಿದ್ದರೆ, ರಾಜನಾಗಿದ್ದರೆ, ಹೋಗಲಿ ಪುರುಷೋತ್ತಮನಾಗಿದ್ದರೆ…
ಹಾದಿಹೋಕರ ಮಾತಿಗೆ ಬೆಲೆಕೊಟ್ಟು
ಹೆಂಡತಿಗೆ ಅಪಮಾನಸಿ ಅಗ್ನಿಪರೀಕ್ಷೆ ಮಾಡಿಸಿದನೇಕೆ?-
ತುಂಬು ಬಸುರಿಯನು ನದಿದಾಟಿಸಿ ಕಾಡಿಗೆ ಬಿಟ್ಟಿದ್ದೇಕೆ?

ಮಕ್ಕಳಾದರೂ ಮರಳಿನೋಡದ ಜನಪಾಲಕ
ಪ್ರಜೆಗಳ ಪರಾಕದಮಲಿಗೆ ಹೆಂಡತಿ ಮಕ್ಕಳಿಗೆ
ಅಪಾತ್ರನಾದ ರಾಮರಾಮ ಅದ್ಹೇಗೆ ದೇವಮಾನವನಂತೆ?-
ಅವನೊಬ್ಬ ಪುರುಷರಲಿ ಪುರುಷನಷ್ಟೇ
ಅವನ ಬಯೋಡಾಟಾ ಬದಲಿಸಬೇಕು.

ನಿರ್ಭಿಡೆಯ ಮಕ್ಕಳು ಕಥೆ ಹಿಂಜುತ್ತಿವೆ
ನೀನೇ ಉತ್ತರಹೇಳು ರಾಮಾ.
ವಿಜ್ಞಾನ ದೇವಕಣ ಸೃಷ್ಠಿಯ ಆದಿ ಅನಂತದ
ನಿಗೂಢದೊಳಹೊಕ್ಕು ಝಾಲಾಡಿಸಿ ಸತ್ಯ ಬಹಿರಂಗಿಸುವ
ಈ ಹೊಸ ದೇವರುಗಳಿಗೆ ಬೆರಗಾಗುವುದಬಿಟ್ಟು
ಬೇರೇನೂ ಉಳಿಯಲಿಲ್ಲ ರಾಮಾ
ರಾಮ ರಾಮಾ.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...