Home / ಕವನ / ಕವಿತೆ / ಬಯೋಡಾಟಾ ಬದಲಿಸಬೇಕಂತೆ

ಬಯೋಡಾಟಾ ಬದಲಿಸಬೇಕಂತೆ

ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ
ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ
ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ
ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ
ಮನಮೋಹಕ ಚಿತ್ತಾಕರ್‍ಷಕ
ಕ್ಯಾಲಂಡರದೊಳಗಿನ ದೃಶ್ಯಕಾವ್ಯ.

ದೇವದೇವೋತ್ತಮ ಪುರುಷೋತ್ತಮ ರಾಮನೆಂದರೆ
ರಾಜಾರಾಮ ರಘುಕುಲತಿಲಕನೆಂದರೆ
ಪಿಳಿಪಿಳಿ ಕಣ್ಣು ಹೊಸಪೀಳಿಗೆಯವುಗಳಿಗೆ
ರಾಮನವತಾರದ ಬಟ್ಟೆತೊಟ್ಟು
ಕುಸಂಬರಿ ಪಾನಕ ಸವಿದು
ದಿನದ ರಜೆ ಕಳೆದುಬಿಟ್ಟರೆ
ಹಿರಿಯರ ರಾಮನಾಮಸ್ಮರಣೆ ಏನೆಂದು
ಯಾಕೆಂದು ಗೊತ್ತಾಗದೆ ಗಲಿಬಿಲಿ.

ಭಕ್ತಿಭಾವ ನಂಬಿಕೆ ವಿಶ್ವಾಸಗಳ ಬಗೆಗೆ ಹೇಳಿದ್ದಾದರೆ
ಅದೆಂತಹ ನಾಮಬಲ, ಹೇಗಿದ್ದನಾತ
ಅವನ ಓದು ಕೆಲಸ ಹೆಂಡತಿ ಮಕ್ಕಳು ಏನೆಂದು
ನಿನ್ನ ಬಯೋಡಾಟಾ ಕೇಳುತ್ತಾರೆ ರಾಮಾ-

ಮೊದಲ ಸುತ್ತಿನ ನಿನ್ನ ಪರಿಚಯ ಕೇಳಿದ್ದೇ ಸಾಕು
ಈಗ ನೂರಾರು ಪ್ರಶ್ನೆಗಳ ಮೂಟೆಹೊತ್ತು ಬಂದಿದ್ದಾರೆ.
ದೇವನಾಗಿದ್ದರೆ…
ಗೊತ್ತಾಗಬೇಕಿತ್ತು ಮಾಯಾಜಿಂಕೆಯ ಬೆನ್ನುಹತ್ತಿ
ದಂಡಕಾರಣ್ಯದಲಿ ಸೀತೆಯನ್ನು ಬಿಟ್ಟು ಹೋದನೇಕೆ?-
ಹದಿನಾಲ್ಕು ವರ್ಷ ಮಕ್ಕಳಾಗದಂತೆ
ಅದಾವ ನಾರುಬೇರು ಕೊಟ್ಟು ಸೀತೆಗೆ ಸಮಾಧಾನಿಸಿದನಂತೆ?
ರಾವಣ, ಸೀತಾಪರಹಣ, ಮರುಪಟ್ಟಾಭಿಷೇಕ
ಅಬ್ಬಬ್ಬಾ! ಹೌದು, ಆದರೆ….
ದೇವನಾಗಿದ್ದರೆ, ರಾಜನಾಗಿದ್ದರೆ, ಹೋಗಲಿ ಪುರುಷೋತ್ತಮನಾಗಿದ್ದರೆ…
ಹಾದಿಹೋಕರ ಮಾತಿಗೆ ಬೆಲೆಕೊಟ್ಟು
ಹೆಂಡತಿಗೆ ಅಪಮಾನಸಿ ಅಗ್ನಿಪರೀಕ್ಷೆ ಮಾಡಿಸಿದನೇಕೆ?-
ತುಂಬು ಬಸುರಿಯನು ನದಿದಾಟಿಸಿ ಕಾಡಿಗೆ ಬಿಟ್ಟಿದ್ದೇಕೆ?

ಮಕ್ಕಳಾದರೂ ಮರಳಿನೋಡದ ಜನಪಾಲಕ
ಪ್ರಜೆಗಳ ಪರಾಕದಮಲಿಗೆ ಹೆಂಡತಿ ಮಕ್ಕಳಿಗೆ
ಅಪಾತ್ರನಾದ ರಾಮರಾಮ ಅದ್ಹೇಗೆ ದೇವಮಾನವನಂತೆ?-
ಅವನೊಬ್ಬ ಪುರುಷರಲಿ ಪುರುಷನಷ್ಟೇ
ಅವನ ಬಯೋಡಾಟಾ ಬದಲಿಸಬೇಕು.

ನಿರ್ಭಿಡೆಯ ಮಕ್ಕಳು ಕಥೆ ಹಿಂಜುತ್ತಿವೆ
ನೀನೇ ಉತ್ತರಹೇಳು ರಾಮಾ.
ವಿಜ್ಞಾನ ದೇವಕಣ ಸೃಷ್ಠಿಯ ಆದಿ ಅನಂತದ
ನಿಗೂಢದೊಳಹೊಕ್ಕು ಝಾಲಾಡಿಸಿ ಸತ್ಯ ಬಹಿರಂಗಿಸುವ
ಈ ಹೊಸ ದೇವರುಗಳಿಗೆ ಬೆರಗಾಗುವುದಬಿಟ್ಟು
ಬೇರೇನೂ ಉಳಿಯಲಿಲ್ಲ ರಾಮಾ
ರಾಮ ರಾಮಾ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...