Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...