Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...