Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...