Home / ಕವನ / ಕವಿತೆ / ಸ್ವಚ್ಛ ಭಾರತ್

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ
ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ
ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ
ಆದ ಸಂತೋಷ ಅಷ್ಟಿಷ್ಟಲ್ಲ
ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ
ಕಿವಿಗಳು ಕೇಳಿಯೇ ಪಾವನವಾದವು
ಕಣ್ಣುಗಳು ನೋಡಿಯೇ ಬಿಡಲು ಹಟಕ್ಕೆ ಬಿದ್ದವು
ದೇಶಭಕ್ತರೆಲ್ಲ ಪೊರಕೆ ಹಿಡಿದರು

ಫಳಫಳ ಹೊಳೆವ ದೊಡ್ಡದೊಡ್ಡ ಗಾಜು ಕಿಟಕಿಗಳ
ಆಫೀಸುಗಳ ತಾರುತಂತಿ ತಗಡು ಬೋರ್‍ಡು
ನಟ್ ಬೋಲ್ಟ್‌ಗಳ ಸಾಪ್ಟವೇರ್ ಕಸವೆಲ್ಲ
ಅವರವರ ಗೇಟ್ ಮುಂದೆ ಬಿದ್ದಿವೆ-
ಸ್ವಚ್ಛ ಭಾರತದ ಪೊರಕೆಯವರನು ನೋಡಿ
ಧೂಳ ಜಾಡಿಸಿ ಕಾರಿನ ಕಿಟಕಿ ಏರಿಸುತ
ಹೊರಟೇಬಿಡುವರು ಆರೆಂಟು ಅಂಕಿಯ
ಹಣಪಡೆವ ಜಾಣರು ಮೋದಿಜಿ!

ಪುಣ್ಯಕ್ಷೇತ್ರಗಳ ಒಳಗೆ ಕಣ್ಬಿಟ್ಟ ದೇವನೆದುರು
ಧೂಪ ದೀಪ ಹೂಹಾರ ಹಣ್ಣು ಪ್ರಸಾದ
ಮನಸಿಗೆ ತೃಪ್ತಿ ದೇವರ ದರುಶನ ಪಡೆದ ಭಾಗ್ಯ
ಈಚೆಗೆ ಬಂದದ್ದೆ ಆಚೀಚೆ ಕಣ್ಣಾಡಿಸಿದ್ದೇ ಕ್ಷಣ
ಎಲ್ಲೆಲ್ಲೂ ಕೊಳೆತ ಎಲೆಹೂವು ಹಣ್ಣುಗಳ ಚಿಲ್ಲಾಪಿಲ್ಲಿ
ದನಗಳ ಸಗಣಿ ಗಂಜಲಿನ ಗಬ್ಬುವಾಸನೆ ಪಿಚಿಪಿಚಿ.
ಸ್ವಚ್ಛ ಭಾರತ ಹುರುಪಿನ ಪೊರಕೆಯವರು
ಮುಂದಾದರೆ ಅವರ ಜಾತಿಮತ ಬಣ್ಣ ಕೆದಕಿ
ನಾಲ್ಕೈದು ಬೈಗುಳ ಬಯ್ದು
ಮೂಗು ಮುಚ್ಚಿ ಕಾರೇರಿ ಹೋರಟೇಬಿಡುತ್ತಾರೆ ಮೋದಿಜಿ!!

ಶಾಲೆ ಕಾಲೇಜು ಆಫೀಸುಗಳೊಳಗೂ
ಅಧಿಕಾರಿಗಳೆಂಬುವವರ ಕತ್ತಲೆಕೋಣೆಗಳೊಳಗೂ
ಜೀವ ಉಳಿಸುವ ಜೀವಾಲಯದೊಳಗೂ
ಭ್ರಷ್ಟರಾಜಕೀಯ ಅತ್ಯಾಚಾರಗಳ ದುರಂತ ಸರಮಾಲೆ
ದೇಶದ ರೈಲು ಹಳಿತಪ್ಪಿ ಎಲ್ಲೆಲ್ಲೊ ಸುತ್ತುತ್ತಿದೆ
ಹಳಿಗುಂಟ ಹಾದಿಗುಂಟ ಕಸವೋ ಕಸ ಮೋದಿಜಿ!

ಎಲುಬಿಲ್ಲದ ನಾಲಿಗೆಗಳ ಶಬ್ದಮಾಲಿನ್ಯ ಭ್ರಷ್ಟರಮಾಲಿನ್ಯ
ಅತ್ಯಾಚಾರಮಾಲಿನ್ಯ ಜಾತಿಮಾಲಿನ್ಯ ಗೂಡಿಸಿ ಗುಂಡಿಗೆ ಹಾಕಲು
ನಿಮ್ಮ ಪೊರಕೆಗಳು ಬೇಕಾಗಿವೆ ಮೋದಿಜಿ.

ಎಲ್ಲೆಲ್ಲೂ ಎಲ್ಲದಕ್ಕೂ ಬರೀ ವಾದ ಪ್ರತಿವಾದ
ಶಾಂತಿ ನೆಮ್ಮದಿ ಹಾಳುಗೆಡವಿ
ತಾವೂ ಹಾಳಾಗುವ ದ್ವಂದಿಗಳ ಮುಖವಾಡ
ಕಳಚುವ ವಾಸ್ತವದ ಅರಿವು ಗ್ರಹಿಸುವ
ಶುದ್ಧ ಸ್ವಚ್ಛ ಕಳಕಳಿಯ ಬೀಜಗಳು ಬಿತ್ತುವ
ಪೊರಕೆಯಂಥ ಮಾದರಿಗಳು ಬೇಕಾಗಿವೆ ಮೋದಿಜಿ
ದೇಶವೆಂಬ ಮನಸು; ಮನಸೆಂಬ ದೇಶ
ನಮ್ಮೊಳಗೆ ಅನುಗಾಲವೂ ಉಳಿಯಲು
ಮಾದರಿಯ ಪೊರಕೆಗಳು ಬೇಕೆ ಬೇಕು ಮೋದಿಜಿ
ಮಾದರಿಯ ಪೊರಕೆಗಳು ಬೇಕೇ ಬೇಕು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...