Home / ಕವನ / ಕವಿತೆ / ದೇವರು ನಗುವುದಾ ಕಂಡೆ

ದೇವರು ನಗುವುದಾ ಕಂಡೆ

ಪೇಪರಿನ ಬಾಣಬತ್ತಳಿಕೆಗಳ ಹಿಡಿದು
ಒಬ್ಬರನ್ನೊಬ್ಬರು ಗುರಿಯಿಟ್ಟು ಕೊಲ್ಲಲು
ಪುರಾವೆ ಪತ್ರಗಳ ಹಿಡಿದು
ದೇವರಿಗೆ ಹೊರಟಿವೆ ರಾಜಕೀಯ ಪಾತ್ರಧಾರಿಗಳು*
ಬಣ್ಣಬಣ್ಣದ ಹುಲಿವೇಷದವುಗಳು.

ಆಣೆ ಪ್ರಮಾಣ ಪ್ರತಿಜ್ಞೆಗಳಿಗೆ
ಎಚ್ಚರಿದ್ದಂತೆಯೇ ಇದ್ದ ದೇವರು
ಇಬ್ಬದಿಯ ಗಂಟುಮುಖಗಳ ನಡುವೆ
ಗುಮ್ಮಾಗಿ ನಗುವುದಾ ಕಂಡೆ.

ಕಂಡೆಕಂಡೆ ತುಕ್ಕುಹಿಡಿದ ಖಾಲಿಕೊಡಗಳ
ಬುಡಬುಡಿಕೆ ಭರ್‍ಚಿ ಗುರಾಣಿ ಎಸೆದಾಟ
ದೇವರು ಕಾಣಿಸಿಯೇ ಕಾಣುವನೆಂಬ
ಭರವಸೆ ಹೊತ್ತು ಕಣ್ಣುಮುಚ್ಚಿ ತುಟಿಬಿಚ್ಚಿ
ಪಿಟಿಪಿಟಿಸುವ ಸಮಯಸಾಧಕರ.

ತಣ್ಣನೆಯ ಬೆಳಕಿನಾ ನಡುವೆ
ಕಿವುಡ ಮೂಕ ಹೆಳವನಾಗಿ ಕಲ್ಲಿನೊಳಗೆ
ಕಣ್ಣು ಪಿಳಿಕಿಸದೆ ಕತ್ತಲೆ ಕೋಣೆಯಲಿ
ಇವರಂಥವರೇ ತೊಡಿಸಿದ ಮುಖವಾಡದೊಳಗೆ
ಉಸಿರು ಬಿಗಿಹಿಡಿದು ಇವರಂತೆಯೇ
ಮೇಲೆ ನಗುಮುಖ ಹೊಂದಿರುವ ದೇವರು ನಗುವುದಾ ಕಂಡೆ.

ಜರತಾರಿ ಪಂಚೆ ಉಟ್ಟ ಪಾತ್ರಧಾರಿಗಳು
ಹತ್ತೂ ಬೆರಳ ಹರಳಿನ ನಕ್ಷತ್ರಕರು
ಕುಂಕುಮ ಶ್ರೀಗಂಧ ಪೂಸಿತರು
ದೇವರನು ಮಾತನಾಡಿಸಿಯೇ ಬಂದಂತೆ
ಕಚ್ಚಾಡಿದ್ದೇ ಕಚ್ಚಾಡಿ ನಂಜೇರಿಸಿಕೊಂಡು
ಸುರಿವ ಮಳೆಯೊಳಗೆ ಭಾಷಣ ಬಿಗಿದದ್ದು ನೋಡಿ
ದೇವರು ನಕ್ಕ.
ಮಂತ್ರಿಗಳಂತೆ ಇವು ಅಲ್ಲಲ್ಲ ತಂತ್ರಿಗಳು.
ಕಂಡೆ ಕಂಡೆ ಮತ್ತೊಮ್ಮೆ ಇನ್ನೊಮ್ಮೆ
ದೇವರು ನಗುವುದಾ ಕಂಡೆ.

ರಾತ್ರಿಗೆ ಸುಸ್ತಾದ ದೇವನ ಹೂಹಾರ
ಮುಖವಾಡ ತೆಗೆದಿಟ್ಟು ಪೂಜಾರಿ
ಹಗುರಾಗಿ ಹಣ್ಣು ಹಂಪಲ ಹೊತ್ತುಕೊಂಡು ಹೋದದ್ದೇ-
ಬೆತ್ತಲೆ ದೇವರು ಸುಸ್ತಾಗಿ
ಗಡದ್ದಾಗಿ ನಿದ್ದೆಗೆ ಜಾರಿದಾಗಲೂ
ಈ ಯಂತ್ರ ಮಂತ್ರ ತಂತ್ರದವರ
ಕಂಬಿ ಕಟಕಟೆಯ ಶಿಕ್ಷೆ ನೋಡಿ
ಕೈಯಲೊಂದು ಏಕತಾರಿ ಕೊಡಬೇಕಿವಕೆನ್ನುತ
ದೇವರು ಗಹಗಹಿಸಿ ನಗುವುದಾ ಕಂಡೆ
ದೇವರು ಬಿದ್ದು ಬಿದ್ದು ನಗುವುದ ಕಂಡೆ.

* [ಮಾಜಿ ಮಂತ್ರಿಗಳು ಯಡಿಯೂರಪ್ಪ ಮತ್ತು ಕುಮಾರಸ್ವಾಮಿ – ಧರ್ಮಸ್ಥಳದ ಮಂಜುನಾಥನ ಎದುರು. ಮಂತ್ರಿ ಕಿಮ್ಮನೆ ರತ್ನಾಕರ – ಮಾರಿಕಾಂಬ ದೇವಸ್ಥಾನದಲ್ಲಿ.]
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...