ದೇವರು ನಗುವುದಾ ಕಂಡೆ

ಪೇಪರಿನ ಬಾಣಬತ್ತಳಿಕೆಗಳ ಹಿಡಿದು
ಒಬ್ಬರನ್ನೊಬ್ಬರು ಗುರಿಯಿಟ್ಟು ಕೊಲ್ಲಲು
ಪುರಾವೆ ಪತ್ರಗಳ ಹಿಡಿದು
ದೇವರಿಗೆ ಹೊರಟಿವೆ ರಾಜಕೀಯ ಪಾತ್ರಧಾರಿಗಳು*
ಬಣ್ಣಬಣ್ಣದ ಹುಲಿವೇಷದವುಗಳು.

ಆಣೆ ಪ್ರಮಾಣ ಪ್ರತಿಜ್ಞೆಗಳಿಗೆ
ಎಚ್ಚರಿದ್ದಂತೆಯೇ ಇದ್ದ ದೇವರು
ಇಬ್ಬದಿಯ ಗಂಟುಮುಖಗಳ ನಡುವೆ
ಗುಮ್ಮಾಗಿ ನಗುವುದಾ ಕಂಡೆ.

ಕಂಡೆಕಂಡೆ ತುಕ್ಕುಹಿಡಿದ ಖಾಲಿಕೊಡಗಳ
ಬುಡಬುಡಿಕೆ ಭರ್‍ಚಿ ಗುರಾಣಿ ಎಸೆದಾಟ
ದೇವರು ಕಾಣಿಸಿಯೇ ಕಾಣುವನೆಂಬ
ಭರವಸೆ ಹೊತ್ತು ಕಣ್ಣುಮುಚ್ಚಿ ತುಟಿಬಿಚ್ಚಿ
ಪಿಟಿಪಿಟಿಸುವ ಸಮಯಸಾಧಕರ.

ತಣ್ಣನೆಯ ಬೆಳಕಿನಾ ನಡುವೆ
ಕಿವುಡ ಮೂಕ ಹೆಳವನಾಗಿ ಕಲ್ಲಿನೊಳಗೆ
ಕಣ್ಣು ಪಿಳಿಕಿಸದೆ ಕತ್ತಲೆ ಕೋಣೆಯಲಿ
ಇವರಂಥವರೇ ತೊಡಿಸಿದ ಮುಖವಾಡದೊಳಗೆ
ಉಸಿರು ಬಿಗಿಹಿಡಿದು ಇವರಂತೆಯೇ
ಮೇಲೆ ನಗುಮುಖ ಹೊಂದಿರುವ ದೇವರು ನಗುವುದಾ ಕಂಡೆ.

ಜರತಾರಿ ಪಂಚೆ ಉಟ್ಟ ಪಾತ್ರಧಾರಿಗಳು
ಹತ್ತೂ ಬೆರಳ ಹರಳಿನ ನಕ್ಷತ್ರಕರು
ಕುಂಕುಮ ಶ್ರೀಗಂಧ ಪೂಸಿತರು
ದೇವರನು ಮಾತನಾಡಿಸಿಯೇ ಬಂದಂತೆ
ಕಚ್ಚಾಡಿದ್ದೇ ಕಚ್ಚಾಡಿ ನಂಜೇರಿಸಿಕೊಂಡು
ಸುರಿವ ಮಳೆಯೊಳಗೆ ಭಾಷಣ ಬಿಗಿದದ್ದು ನೋಡಿ
ದೇವರು ನಕ್ಕ.
ಮಂತ್ರಿಗಳಂತೆ ಇವು ಅಲ್ಲಲ್ಲ ತಂತ್ರಿಗಳು.
ಕಂಡೆ ಕಂಡೆ ಮತ್ತೊಮ್ಮೆ ಇನ್ನೊಮ್ಮೆ
ದೇವರು ನಗುವುದಾ ಕಂಡೆ.

ರಾತ್ರಿಗೆ ಸುಸ್ತಾದ ದೇವನ ಹೂಹಾರ
ಮುಖವಾಡ ತೆಗೆದಿಟ್ಟು ಪೂಜಾರಿ
ಹಗುರಾಗಿ ಹಣ್ಣು ಹಂಪಲ ಹೊತ್ತುಕೊಂಡು ಹೋದದ್ದೇ-
ಬೆತ್ತಲೆ ದೇವರು ಸುಸ್ತಾಗಿ
ಗಡದ್ದಾಗಿ ನಿದ್ದೆಗೆ ಜಾರಿದಾಗಲೂ
ಈ ಯಂತ್ರ ಮಂತ್ರ ತಂತ್ರದವರ
ಕಂಬಿ ಕಟಕಟೆಯ ಶಿಕ್ಷೆ ನೋಡಿ
ಕೈಯಲೊಂದು ಏಕತಾರಿ ಕೊಡಬೇಕಿವಕೆನ್ನುತ
ದೇವರು ಗಹಗಹಿಸಿ ನಗುವುದಾ ಕಂಡೆ
ದೇವರು ಬಿದ್ದು ಬಿದ್ದು ನಗುವುದ ಕಂಡೆ.

* [ಮಾಜಿ ಮಂತ್ರಿಗಳು ಯಡಿಯೂರಪ್ಪ ಮತ್ತು ಕುಮಾರಸ್ವಾಮಿ – ಧರ್ಮಸ್ಥಳದ ಮಂಜುನಾಥನ ಎದುರು. ಮಂತ್ರಿ ಕಿಮ್ಮನೆ ರತ್ನಾಕರ – ಮಾರಿಕಾಂಬ ದೇವಸ್ಥಾನದಲ್ಲಿ.]
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩೩
Next post ರಂಗಣ್ಣನ ಕನಸಿನ ದಿನಗಳು – ೨೯

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys