Home / ಕವನ / ಕವಿತೆ / ನಿರ್‍ದಯಿಗಳು

ನಿರ್‍ದಯಿಗಳು

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು
ಸಂತೋಷದ ತಮಟೆ ಬಾರಿಸಲಿಲ್ಲ
ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ
ಖರ್‍ಚು ಜಾಸ್ತಿ ಎಂದು ನೊಂದರು

ರ್‍ಯಾಂಕ್ ಪಡೆದಳೆಂದು ಬೀಗಿ
ತಮಟೆ ಬಾರಿಸಲಿಲ್ಲ
ಹೆಚ್ಚು ಓದಿದವನನ್ನು ಹುಡುಕಬೇಕಲ್ಲ
ಬೆವರಿಳಿಸತೊಡಗಿದರು.

ಮಗಳ ಮದುವೆ ಎಂದೇನು
ಸಂಭ್ರಮದ ತಮಟೆ ಬಾರಿಸಲಿಲ್ಲ
ವಸ್ತ್ರ ಒಡವೆ ಹಾಕಿ ಅಕ್ಷತೆ ಉದುರಿಸಿ
ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆಂದು
ಆರತಿ ಎತ್ತಿದರು.


ಮಗನನ್ನು ಕಸಿದುಕೊಂಡಳೆಂದು
ಉರಿಯ ತಮಟೆ ಬಾರಿಸಿದರಿಲ್ಲಿ
ಗಳಿಸಿದ್ದೆಲ್ಲ ಇವಳ ಬೆಡಗು ಬಿನ್ನಾಣಕ್ಕೆಂದು
ಚುಚ್ಚಿದರು ಕಣ್ಣೀರು ಹರಿಸಿದರು.

ಬಂದವಳು ಹೆಣ್ಣೆ ಹಡೆದಳೆಂದು
ವಂಶೋದ್ಧಾರಕರಿವರು ತಮಟೆ ಬಾರಿಸಿದರು
ಗಂಡುಮಗಳ ಹೆರಲಾರದ ಬಂಜೆ
ಎಂದೇ ಬಿರುದುಕೊಟ್ಟು ಬೆಂಕಿಹಚ್ಚಿದರು.
ಬೈಕು ಕಾರು ಓಡಿಸುವ ಗಂಡುಬೀರಿ
ಮನೆಯವರ ಸೇವೆಮಾಡದ ಸೊಕ್ಕಿನಾಕೆ
ಎಲ್ಲೆಲ್ಲೂ ತಮಟೆ ಬಾರಿಸುವವರು
ಅಡುಗೆಮನೆಯ ಕಟಕಟೆಯಲ್ಲಿ ನಿಲ್ಲಿಸಿ
ನೂರುಬೈಗುಳ ಹೂವೇರಿಸುತ
ಮನೆಮುರುಕಿ ಹಣೆಪಟ್ಟಿ ಕಟ್ಟುವರು

ತನ್ನದೇ ಕರುಳಿನ ಕುಡಿಯ ಹೆಮ್ಮೆಗೆ
ತಮಟೆ ಬಾರಿಸದ ಅಪ್ಪ ಅಮ್ಮ
ಕ್ಷಣಕ್ಷಣಕೂ ಅಪರಾಧಿ ಇವಳೆಂದು
ತಮಟೆ ಬಾರಿಸುವ ಮಾವ ಅತ್ತೆ


ಪ್ರೀತಿವಾತ್ಸಲ್ಯದ ಹೆಣ್ಣು ಜೀವ
ಸ್ವಾರ್‍ಥಿಗಳ ಕೈಗೊಂಬೆಯಾಗಿ
ನೊಂದು ಬೆಂದು ತಳಮಳಿಸಿ
ಒಂದೊಮ್ಮೆ ಅರ್ಥೈಸಿಕೊಳ್ಳದ
ಕಿವುಡ ನಾಟಕಕಾರರನು ದಾಟಿ
ಮರುಭೂಮಿಯಾಗಿಯೋ
ಜಲಪಾತವಾಗಿಯೋ
ಹೀಗೆ ಕಣ್ಮರೆಯಾಗುವಳು

ಆದರೂ ಮತ್ತೆ ಮತ್ತೆ ತಮಟೆಗಳು
ಹಲಗೆ ಕಹಳೆಯಾಗಿ ಬಾರಿಸುತ್ತಲೇ ಇರುತ್ತವೆ
ನಿರ್‍ದಯಿಗಳ ಬಾಯಲ್ಲಿ
ಇವಳು ಹೀಗೆ ಹಾಗೆ ಎಂದಾಗಲಿ
ಹೆಣ್ಣುಜೀವ ಮುತ್ತೈದೆಸಾವು ಎಂದಾಗಲಿ….
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ