ನಿರ್‍ದಯಿಗಳು

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು
ಸಂತೋಷದ ತಮಟೆ ಬಾರಿಸಲಿಲ್ಲ
ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ
ಖರ್‍ಚು ಜಾಸ್ತಿ ಎಂದು ನೊಂದರು

ರ್‍ಯಾಂಕ್ ಪಡೆದಳೆಂದು ಬೀಗಿ
ತಮಟೆ ಬಾರಿಸಲಿಲ್ಲ
ಹೆಚ್ಚು ಓದಿದವನನ್ನು ಹುಡುಕಬೇಕಲ್ಲ
ಬೆವರಿಳಿಸತೊಡಗಿದರು.

ಮಗಳ ಮದುವೆ ಎಂದೇನು
ಸಂಭ್ರಮದ ತಮಟೆ ಬಾರಿಸಲಿಲ್ಲ
ವಸ್ತ್ರ ಒಡವೆ ಹಾಕಿ ಅಕ್ಷತೆ ಉದುರಿಸಿ
ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆಂದು
ಆರತಿ ಎತ್ತಿದರು.


ಮಗನನ್ನು ಕಸಿದುಕೊಂಡಳೆಂದು
ಉರಿಯ ತಮಟೆ ಬಾರಿಸಿದರಿಲ್ಲಿ
ಗಳಿಸಿದ್ದೆಲ್ಲ ಇವಳ ಬೆಡಗು ಬಿನ್ನಾಣಕ್ಕೆಂದು
ಚುಚ್ಚಿದರು ಕಣ್ಣೀರು ಹರಿಸಿದರು.

ಬಂದವಳು ಹೆಣ್ಣೆ ಹಡೆದಳೆಂದು
ವಂಶೋದ್ಧಾರಕರಿವರು ತಮಟೆ ಬಾರಿಸಿದರು
ಗಂಡುಮಗಳ ಹೆರಲಾರದ ಬಂಜೆ
ಎಂದೇ ಬಿರುದುಕೊಟ್ಟು ಬೆಂಕಿಹಚ್ಚಿದರು.
ಬೈಕು ಕಾರು ಓಡಿಸುವ ಗಂಡುಬೀರಿ
ಮನೆಯವರ ಸೇವೆಮಾಡದ ಸೊಕ್ಕಿನಾಕೆ
ಎಲ್ಲೆಲ್ಲೂ ತಮಟೆ ಬಾರಿಸುವವರು
ಅಡುಗೆಮನೆಯ ಕಟಕಟೆಯಲ್ಲಿ ನಿಲ್ಲಿಸಿ
ನೂರುಬೈಗುಳ ಹೂವೇರಿಸುತ
ಮನೆಮುರುಕಿ ಹಣೆಪಟ್ಟಿ ಕಟ್ಟುವರು

ತನ್ನದೇ ಕರುಳಿನ ಕುಡಿಯ ಹೆಮ್ಮೆಗೆ
ತಮಟೆ ಬಾರಿಸದ ಅಪ್ಪ ಅಮ್ಮ
ಕ್ಷಣಕ್ಷಣಕೂ ಅಪರಾಧಿ ಇವಳೆಂದು
ತಮಟೆ ಬಾರಿಸುವ ಮಾವ ಅತ್ತೆ


ಪ್ರೀತಿವಾತ್ಸಲ್ಯದ ಹೆಣ್ಣು ಜೀವ
ಸ್ವಾರ್‍ಥಿಗಳ ಕೈಗೊಂಬೆಯಾಗಿ
ನೊಂದು ಬೆಂದು ತಳಮಳಿಸಿ
ಒಂದೊಮ್ಮೆ ಅರ್ಥೈಸಿಕೊಳ್ಳದ
ಕಿವುಡ ನಾಟಕಕಾರರನು ದಾಟಿ
ಮರುಭೂಮಿಯಾಗಿಯೋ
ಜಲಪಾತವಾಗಿಯೋ
ಹೀಗೆ ಕಣ್ಮರೆಯಾಗುವಳು

ಆದರೂ ಮತ್ತೆ ಮತ್ತೆ ತಮಟೆಗಳು
ಹಲಗೆ ಕಹಳೆಯಾಗಿ ಬಾರಿಸುತ್ತಲೇ ಇರುತ್ತವೆ
ನಿರ್‍ದಯಿಗಳ ಬಾಯಲ್ಲಿ
ಇವಳು ಹೀಗೆ ಹಾಗೆ ಎಂದಾಗಲಿ
ಹೆಣ್ಣುಜೀವ ಮುತ್ತೈದೆಸಾವು ಎಂದಾಗಲಿ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಜ್ಞಾನ
Next post ರಂಗಣ್ಣನ ಕನಸಿನ ದಿನಗಳು – ೩೦

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…