ಸೊಳ್ಳೆಯ ಕತೆ

ಸೊಳ್ಳೆಯ ಕತೆ

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ.

ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ ಡೆಂಗೆಯಂತ ತೀವ್ರತರದ ಜ್ವರ, ನೆಗಡಿ, ಕೆಮ್ಮು ಇತ್ಯಾದಿ ಕಾಣಿಸಿಕೊಳ್ಳವುದರಿಂದ ಅದನ್ನು ಕೇವಲ ನಿರ್ಲಕ್ಷಿಸುವಂತಿಲ್ಲ ಎಂದು ಲಂಡನ್ ವೈದ್ಯರು ಈಗಾಗಲೇ ದೃಢಪಡಿಸಿರುವರು.

ಸೊಳ್ಳೆ ಕಡಿತದಿಂದ ಕಣ್ಣಿನ ದೃಷ್ಟಿಯೂ ಕಳೆದು ಕೊಳ್ಳುವ ಅಪಾಯವಿದೆಯೊಂದು ಲಂಡನ್‌ಲ್ಲೊಂದು ಇಂತಹ ಪ್ರಕರಣವೊಂದು ಈಗಾಗಲೇ ವರದಿಯಾಗಿ ಇಡೀ ವಿಶ್ವವನ್ನೇ ಗಢಗಢ ನಡುಗಿಸಿರುವುದು.

ಹೌದು! ೬೯ ವರ್ಷದ ಲಂಡನ್ ಮಹಿಳೆಯೊಬ್ಬರು ರಜೆಯ ಪ್ರವಾಸದಲ್ಲಿ ಕೆರಿಬಿಯನ್ ರಾಷ್ಟ್ರಕ್ಕೆ ತೆರಳಿದ್ದಳು. ಅಲ್ಲಿ ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾಗೆ ತುತ್ತಾಗಿ ಕಣ್ಣನ್ನೇ ಕಳೆದುಕೊಂಡಿದ್ದಾಳೆ!

೨೦೧೪ರಲ್ಲಿ ಕೆರಿಬಿಯನ್ ದ್ವೀಪ ಗ್ರೆನಡಾಗೆ ತೆರಳಿದ್ದ ಮಹಿಳೆಗೆ ಸೊಳ್ಳೆ ಕಡಿದಿವೆ. ಬಳಿಕ ಆಕೆಗೆ ಜ್ವರ, ಮಂಡಿ, ಮಣೆಕಟ್ಟುಗಳ ನೋವು, ಸುಸ್ತು ಕಾಡಲಾರಂಭಿಸಿದೆ. ಇದಾದ ಸ್ವಲ್ಪ ದಿನಗಳ ಬಳಿಕ ಬಲಗಣ್ಣಿನಲ್ಲಿ ದೃಷ್ಟಿದೋಷ ಕಾಣಿಸಿಕೊಂಡಿದೆ.

ಆಗಸ್ಟ್ ೨೦೧೫ ರಲ್ಲಿ ಸ್ವದೇಶಕ್ಕೆ ಹಿಂದಿರುಗಿದ ನಂತರ ಅವರ ಕಣ್ಣಿಗೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು! ವೈದ್ಯರ ಬಳಿಗೆ ಹೋದಾಗ ಇದು ಚಿಕೂನ್ ಗೂನ್ಯಾಗೆ ಜ್ವರದಿಂದ ಈ ದೋಷ ಕಾಣಿಸಿಕೊಂಡಿದೆಯೆಂದು ದೃಢಪಟ್ಟಿದೆ. ಚಿಕೂನ್‌ಗುನ್ಯಾಗ್ ತುತ್ತಾದವರು ಜೀವನ ಪರ್ಯಂತ ಕೆಲ ಸಮಸ್ಯೆಗಳಿಗೆ ಖಂಡಿತ ತುತ್ತಾಗುವುದುಂಟು. ಇದರಲ್ಲಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯೂ ದಟ್ಟವಾಗಿದೆಯೆಂದು ವೈದ್ಯರು ದೃಢಪಡಿಸಿರುವರು.

ಅಬ್ಬಾ! ಸೊಳ್ಳೆಗಳೆ… ಇನ್ನು ಬರುಬರುತ್ತಾ ಏನೆಲ್ಲಾ ಅನಾಹುತ ಮಾಡಬಲ್ಲವೆಂಬುದನ್ನು ಈಗಲೇ ಊಹಿಸುವುದು ಕಷ್ಟ ಸಾಧ್ಯವಾದರೂ ಸೊಳ್ಳೆಗಳಿಂದ ಬಲು ಎಚ್ಚರಿಕೆ ವಹಿಸುವುದೂ ಸಣ್ಣಪುಟ್ಟ ಮಕ್ಕಳನ್ನು ರಕ್ಷಿಸುವುದೂ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದು ಅಲ್ಲವೇ??
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಸ್ಯ ಪ್ರಜ್ಞೆ
Next post ನಿಂತಲ್ಲಿ ನಿಲ್ಲದೆ ಮನಸು

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys