Home / ಲೇಖನ / ವಿಜ್ಞಾನ / ಸೊಳ್ಳೆಯ ಕತೆ

ಸೊಳ್ಳೆಯ ಕತೆ

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ.

ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ ಡೆಂಗೆಯಂತ ತೀವ್ರತರದ ಜ್ವರ, ನೆಗಡಿ, ಕೆಮ್ಮು ಇತ್ಯಾದಿ ಕಾಣಿಸಿಕೊಳ್ಳವುದರಿಂದ ಅದನ್ನು ಕೇವಲ ನಿರ್ಲಕ್ಷಿಸುವಂತಿಲ್ಲ ಎಂದು ಲಂಡನ್ ವೈದ್ಯರು ಈಗಾಗಲೇ ದೃಢಪಡಿಸಿರುವರು.

ಸೊಳ್ಳೆ ಕಡಿತದಿಂದ ಕಣ್ಣಿನ ದೃಷ್ಟಿಯೂ ಕಳೆದು ಕೊಳ್ಳುವ ಅಪಾಯವಿದೆಯೊಂದು ಲಂಡನ್‌ಲ್ಲೊಂದು ಇಂತಹ ಪ್ರಕರಣವೊಂದು ಈಗಾಗಲೇ ವರದಿಯಾಗಿ ಇಡೀ ವಿಶ್ವವನ್ನೇ ಗಢಗಢ ನಡುಗಿಸಿರುವುದು.

ಹೌದು! ೬೯ ವರ್ಷದ ಲಂಡನ್ ಮಹಿಳೆಯೊಬ್ಬರು ರಜೆಯ ಪ್ರವಾಸದಲ್ಲಿ ಕೆರಿಬಿಯನ್ ರಾಷ್ಟ್ರಕ್ಕೆ ತೆರಳಿದ್ದಳು. ಅಲ್ಲಿ ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾಗೆ ತುತ್ತಾಗಿ ಕಣ್ಣನ್ನೇ ಕಳೆದುಕೊಂಡಿದ್ದಾಳೆ!

೨೦೧೪ರಲ್ಲಿ ಕೆರಿಬಿಯನ್ ದ್ವೀಪ ಗ್ರೆನಡಾಗೆ ತೆರಳಿದ್ದ ಮಹಿಳೆಗೆ ಸೊಳ್ಳೆ ಕಡಿದಿವೆ. ಬಳಿಕ ಆಕೆಗೆ ಜ್ವರ, ಮಂಡಿ, ಮಣೆಕಟ್ಟುಗಳ ನೋವು, ಸುಸ್ತು ಕಾಡಲಾರಂಭಿಸಿದೆ. ಇದಾದ ಸ್ವಲ್ಪ ದಿನಗಳ ಬಳಿಕ ಬಲಗಣ್ಣಿನಲ್ಲಿ ದೃಷ್ಟಿದೋಷ ಕಾಣಿಸಿಕೊಂಡಿದೆ.

ಆಗಸ್ಟ್ ೨೦೧೫ ರಲ್ಲಿ ಸ್ವದೇಶಕ್ಕೆ ಹಿಂದಿರುಗಿದ ನಂತರ ಅವರ ಕಣ್ಣಿಗೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು! ವೈದ್ಯರ ಬಳಿಗೆ ಹೋದಾಗ ಇದು ಚಿಕೂನ್ ಗೂನ್ಯಾಗೆ ಜ್ವರದಿಂದ ಈ ದೋಷ ಕಾಣಿಸಿಕೊಂಡಿದೆಯೆಂದು ದೃಢಪಟ್ಟಿದೆ. ಚಿಕೂನ್‌ಗುನ್ಯಾಗ್ ತುತ್ತಾದವರು ಜೀವನ ಪರ್ಯಂತ ಕೆಲ ಸಮಸ್ಯೆಗಳಿಗೆ ಖಂಡಿತ ತುತ್ತಾಗುವುದುಂಟು. ಇದರಲ್ಲಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯೂ ದಟ್ಟವಾಗಿದೆಯೆಂದು ವೈದ್ಯರು ದೃಢಪಡಿಸಿರುವರು.

ಅಬ್ಬಾ! ಸೊಳ್ಳೆಗಳೆ… ಇನ್ನು ಬರುಬರುತ್ತಾ ಏನೆಲ್ಲಾ ಅನಾಹುತ ಮಾಡಬಲ್ಲವೆಂಬುದನ್ನು ಈಗಲೇ ಊಹಿಸುವುದು ಕಷ್ಟ ಸಾಧ್ಯವಾದರೂ ಸೊಳ್ಳೆಗಳಿಂದ ಬಲು ಎಚ್ಚರಿಕೆ ವಹಿಸುವುದೂ ಸಣ್ಣಪುಟ್ಟ ಮಕ್ಕಳನ್ನು ರಕ್ಷಿಸುವುದೂ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...