Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...