Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...