Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...