Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...