Home / ಲೇಖನ / ಇತರೆ / ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...