Home / ಲೇಖನ / ವ್ಯಕ್ತಿ / ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹದ್ದೂರ್ ಶಾಸ್ತ್ರಿ

ಭವ್ಯ ಭಾರತದ ಎರಡನೆಯ ಪ್ರಧಾನ ಮಂತ್ರಿಯಾಗಿ ೧೯೬೪ ರಲ್ಲಿ ಶಾಸ್ತ್ರಿಯವರು… ಅಧಿಕಾರ ವಹಿಸಿಕೊಂಡಾಗ, ದೇಶದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿತು! ಇದೇ ಸಮಯದಲ್ಲಿ ನೆರೆಯ ರಾಷ್ಟ್ರ ಚೀನಾ ದೇಶವು ಕಾಲು ಕೆದರಿ ಜಗಳ ತೆಗೆದು ಯುದ್ಧ ಮಾಡಲು ಶುರುವಾಯಿತು….!

ಅನಿವಾರ್‍ಯವಾಗಿ ಯುದ್ಧ ಮಾಡಲು ಭಾರತ ಮುಂದಾಯಿತು. ಹೊಸದಾಗಿ ಅಧಿಕಾರ ಸ್ವೀಕರಿಸಿದ ಶಾಸ್ತ್ರೀಜಿಯವರು ಇಡೀ ಸೈನ್ಯವೇನು ಇಡೀ ದೇಶವನ್ನೇ ಹುರಿದುಂಬಿಸಿದರು.

ಇದೇ ಸಮಯದಲ್ಲಿ- ಸುದ್ದಿ ಮಾಧ್ಯಮದವರು ಗಣ್ಯರು ಪ್ರಮುಖರು ಎಲ್ಲರೂ ಪ್ರಧಾನಿಯವರನ್ನು ಮುತ್ತಿ “ನಿಮ್ಮ ಮುಂದಿನ ಸವಾಲ್ ಯಾವುದು?” ಎಂದು ಎಲ್ಲರೂ ಕೇಳಿದರು.

ಲಾಲ್‌ಬಹದ್ದೂರ್ ಶಾಸ್ತ್ರಿಯವರು ಕ್ಷಣ ಹೊತ್ತು ಗಂಭೀರವಾಗಿ ಚಿಂತಿಸಿದರು. ಅವರೇ ಮಾತಿಗೆ ತೊಡಗಿದರು…

“ನನ್ನ ಮುಂದಿರುವ ಸವಾಲು ಎಂದರೆ… ನಮ್ಮ ದೇಶವನ್ನು ಬಲಿಷ್ಠವನ್ನಾಗಿಸುವುದು” ಎಂದರು.

ಅಲ್ಲಿದ್ದವರೆಲ್ಲ ಅವಕ್ಕಾಗಿ ಕುಳಿತರು.

ತುಸು ಹೊತ್ತು ಗಂಭೀರತೆಯಿಂದ ಚಿಂತಿಸಿದ ಸುದ್ದಿ ಮಾಧ್ಯಮದವರೆಲ್ಲ “ಸಾರ್, ಒಂದೋ ಎರಡೋ ಮೂರೋ ಸಮಸ್ಯೆಗಳಿದ್ದರೆ ನೀವು ಎದುರಿಸುವಿರೆಂದು ಭಾವಿಸಬಹುದಾಗಿತ್ತು! ಆದರೆ…. ಬಲಿಷ್ಠ ಶತ್ರು ರಾಷ್ಟ್ರ ಚೀನಾ ಆಕ್ರಮಣದ ಜೊತೆಗೆ ದೇಶ, ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದೆಯಲ್ಲಾ? ಹೇಗೆ ಮುನ್ನಡೆಸುವಿರಿ?” ಎಂದು ಮತ್ತೊಂದು ಪ್ರಶ್ನೆ ಎಸೆದರು.

ಆಗ ಯೋಚಿಸುವ ಮೌನ ವಹಿಸುವ ಗೋಜಿಗೇ ಹೋಗದೆ ಥಟ್ಟನೆ- “ನಾನು ನನ್ನ ಜನರನ್ನು ನಂಬಿದ್ದೇನೆ. ಅವರ ಬಲವನ್ನು ಅರಿತಿದ್ದೇನೆ. ಜೈಜವಾನ್, ಜೈಕಿಸಾನ್ ಎಂದು ರೈತಣ್ಣವನ್ನು ಬಡಿದೆಬ್ಬಿಸುತ್ತೇನೆ. ಇಡೀ ದೇಶವಾಸಿಯು ಪ್ರತಿ ಸೋಮವಾರ ರಾತ್ರಿ ಒಂದು ಊಟ ದೇಶಕ್ಕಾಗಿ ಬಿಡಲು ವಿನಂತಿಸುತ್ತೇನೆ. ಭಾರತೀಯ ಸೇನೆಯಲ್ಲಿ ಒಂದು ರಾಷ್ಟ್ರೀಯತೆ ಐಕ್ಯಮಂತ್ರ ರಾಷ್ಟ್ರ ಪ್ರೇಮ ದೇಶಭಕ್ತಿ ಮೆರೆಯಲು ಕರೆ ಕೊಡುವೆ… ದೇಶದ ಅತ್ಯುನ್ನತ ಸೇವಕನಾಗಿ ನಾನೂ ರಾತ್ರಿ ಊಟ ತ್ಯಜಿಸಿರುವೆ. ಅದನ್ನು ಅಭ್ಯಾಸ ಮಾಡಿ ಎಲ್ಲರಿಗೆ ವಿನಂತಿಸಿರುವೆ. ನನ್ನ ಜನ ನನ್ನ ಮಾತುಗಳನ್ನು ದೇಶವನ್ನು ಮರೆಯಲಾಗದು… ವಿಜಯಪಥ, ಜಯಪಥ, ಪ್ರಗತಿಪಥ ನಮ್ಮದು. ಬರೀ ಒಂದು ಚೀನಾವಲ್ಲ ಅಂಥಾ ನೂರು ಚೀನಾ ದೇಶಗಳು ದಾಳಿ ಮಾಡಿದರೂ ನಮ್ಮ ಸೈನ್ಯ ಬಲವನ್ನು ಎದುರಿಸಲಾರವು” ಎಂದು ಶಾಸ್ತ್ರೀಜಿಯವರು ಅಂದರು.

ಅಲ್ಲಿದ್ದವರೆಲ್ಲ ದಂಗುಬಡಿದು ಹೋದರು. “ಸಾರ್….. ನಿಮ್ಮ ಮಾತು ಕೃತಿ ಆದರ್ಶ ಸರಳ ಸಜ್ಜನಿಕೆ ಖಂಡಿತ ದೇಶವನ್ನು ಮುನ್ನಡೆಸುವವು.. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು. ನಿಮ್ಮ ಜೊತೆಗೆ ನಾವೊಂದೇ ಇಲ್ಲ! ಇಡೀ ದೇಶದ ಜನತೆಯೇ ಇದೆ…” ಎಂದು ಹೃದಯ ತುಂಬಿ ಅಂದರಲ್ಲದೆ, ನಮಸ್ಕರಿಸಿ, ಹರ್ಷದಿ ಹೊರಟುಹೋದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...