ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹದ್ದೂರ್ ಶಾಸ್ತ್ರಿ

ಭವ್ಯ ಭಾರತದ ಎರಡನೆಯ ಪ್ರಧಾನ ಮಂತ್ರಿಯಾಗಿ ೧೯೬೪ ರಲ್ಲಿ ಶಾಸ್ತ್ರಿಯವರು… ಅಧಿಕಾರ ವಹಿಸಿಕೊಂಡಾಗ, ದೇಶದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿತು! ಇದೇ ಸಮಯದಲ್ಲಿ ನೆರೆಯ ರಾಷ್ಟ್ರ ಚೀನಾ ದೇಶವು ಕಾಲು ಕೆದರಿ ಜಗಳ ತೆಗೆದು ಯುದ್ಧ ಮಾಡಲು ಶುರುವಾಯಿತು….!

ಅನಿವಾರ್‍ಯವಾಗಿ ಯುದ್ಧ ಮಾಡಲು ಭಾರತ ಮುಂದಾಯಿತು. ಹೊಸದಾಗಿ ಅಧಿಕಾರ ಸ್ವೀಕರಿಸಿದ ಶಾಸ್ತ್ರೀಜಿಯವರು ಇಡೀ ಸೈನ್ಯವೇನು ಇಡೀ ದೇಶವನ್ನೇ ಹುರಿದುಂಬಿಸಿದರು.

ಇದೇ ಸಮಯದಲ್ಲಿ- ಸುದ್ದಿ ಮಾಧ್ಯಮದವರು ಗಣ್ಯರು ಪ್ರಮುಖರು ಎಲ್ಲರೂ ಪ್ರಧಾನಿಯವರನ್ನು ಮುತ್ತಿ “ನಿಮ್ಮ ಮುಂದಿನ ಸವಾಲ್ ಯಾವುದು?” ಎಂದು ಎಲ್ಲರೂ ಕೇಳಿದರು.

ಲಾಲ್‌ಬಹದ್ದೂರ್ ಶಾಸ್ತ್ರಿಯವರು ಕ್ಷಣ ಹೊತ್ತು ಗಂಭೀರವಾಗಿ ಚಿಂತಿಸಿದರು. ಅವರೇ ಮಾತಿಗೆ ತೊಡಗಿದರು…

“ನನ್ನ ಮುಂದಿರುವ ಸವಾಲು ಎಂದರೆ… ನಮ್ಮ ದೇಶವನ್ನು ಬಲಿಷ್ಠವನ್ನಾಗಿಸುವುದು” ಎಂದರು.

ಅಲ್ಲಿದ್ದವರೆಲ್ಲ ಅವಕ್ಕಾಗಿ ಕುಳಿತರು.

ತುಸು ಹೊತ್ತು ಗಂಭೀರತೆಯಿಂದ ಚಿಂತಿಸಿದ ಸುದ್ದಿ ಮಾಧ್ಯಮದವರೆಲ್ಲ “ಸಾರ್, ಒಂದೋ ಎರಡೋ ಮೂರೋ ಸಮಸ್ಯೆಗಳಿದ್ದರೆ ನೀವು ಎದುರಿಸುವಿರೆಂದು ಭಾವಿಸಬಹುದಾಗಿತ್ತು! ಆದರೆ…. ಬಲಿಷ್ಠ ಶತ್ರು ರಾಷ್ಟ್ರ ಚೀನಾ ಆಕ್ರಮಣದ ಜೊತೆಗೆ ದೇಶ, ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದೆಯಲ್ಲಾ? ಹೇಗೆ ಮುನ್ನಡೆಸುವಿರಿ?” ಎಂದು ಮತ್ತೊಂದು ಪ್ರಶ್ನೆ ಎಸೆದರು.

ಆಗ ಯೋಚಿಸುವ ಮೌನ ವಹಿಸುವ ಗೋಜಿಗೇ ಹೋಗದೆ ಥಟ್ಟನೆ- “ನಾನು ನನ್ನ ಜನರನ್ನು ನಂಬಿದ್ದೇನೆ. ಅವರ ಬಲವನ್ನು ಅರಿತಿದ್ದೇನೆ. ಜೈಜವಾನ್, ಜೈಕಿಸಾನ್ ಎಂದು ರೈತಣ್ಣವನ್ನು ಬಡಿದೆಬ್ಬಿಸುತ್ತೇನೆ. ಇಡೀ ದೇಶವಾಸಿಯು ಪ್ರತಿ ಸೋಮವಾರ ರಾತ್ರಿ ಒಂದು ಊಟ ದೇಶಕ್ಕಾಗಿ ಬಿಡಲು ವಿನಂತಿಸುತ್ತೇನೆ. ಭಾರತೀಯ ಸೇನೆಯಲ್ಲಿ ಒಂದು ರಾಷ್ಟ್ರೀಯತೆ ಐಕ್ಯಮಂತ್ರ ರಾಷ್ಟ್ರ ಪ್ರೇಮ ದೇಶಭಕ್ತಿ ಮೆರೆಯಲು ಕರೆ ಕೊಡುವೆ… ದೇಶದ ಅತ್ಯುನ್ನತ ಸೇವಕನಾಗಿ ನಾನೂ ರಾತ್ರಿ ಊಟ ತ್ಯಜಿಸಿರುವೆ. ಅದನ್ನು ಅಭ್ಯಾಸ ಮಾಡಿ ಎಲ್ಲರಿಗೆ ವಿನಂತಿಸಿರುವೆ. ನನ್ನ ಜನ ನನ್ನ ಮಾತುಗಳನ್ನು ದೇಶವನ್ನು ಮರೆಯಲಾಗದು… ವಿಜಯಪಥ, ಜಯಪಥ, ಪ್ರಗತಿಪಥ ನಮ್ಮದು. ಬರೀ ಒಂದು ಚೀನಾವಲ್ಲ ಅಂಥಾ ನೂರು ಚೀನಾ ದೇಶಗಳು ದಾಳಿ ಮಾಡಿದರೂ ನಮ್ಮ ಸೈನ್ಯ ಬಲವನ್ನು ಎದುರಿಸಲಾರವು” ಎಂದು ಶಾಸ್ತ್ರೀಜಿಯವರು ಅಂದರು.

ಅಲ್ಲಿದ್ದವರೆಲ್ಲ ದಂಗುಬಡಿದು ಹೋದರು. “ಸಾರ್….. ನಿಮ್ಮ ಮಾತು ಕೃತಿ ಆದರ್ಶ ಸರಳ ಸಜ್ಜನಿಕೆ ಖಂಡಿತ ದೇಶವನ್ನು ಮುನ್ನಡೆಸುವವು.. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು. ನಿಮ್ಮ ಜೊತೆಗೆ ನಾವೊಂದೇ ಇಲ್ಲ! ಇಡೀ ದೇಶದ ಜನತೆಯೇ ಇದೆ…” ಎಂದು ಹೃದಯ ತುಂಬಿ ಅಂದರಲ್ಲದೆ, ನಮಸ್ಕರಿಸಿ, ಹರ್ಷದಿ ಹೊರಟುಹೋದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊರವಂಜೀ ಹಾಡು
Next post ಚದುರೆ ನೀನಿರದ ಆಟ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…