Home / ಲೇಖನ / ವ್ಯಕ್ತಿ / ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹದ್ದೂರ್ ಶಾಸ್ತ್ರಿ

ಭವ್ಯ ಭಾರತದ ಎರಡನೆಯ ಪ್ರಧಾನ ಮಂತ್ರಿಯಾಗಿ ೧೯೬೪ ರಲ್ಲಿ ಶಾಸ್ತ್ರಿಯವರು… ಅಧಿಕಾರ ವಹಿಸಿಕೊಂಡಾಗ, ದೇಶದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿತು! ಇದೇ ಸಮಯದಲ್ಲಿ ನೆರೆಯ ರಾಷ್ಟ್ರ ಚೀನಾ ದೇಶವು ಕಾಲು ಕೆದರಿ ಜಗಳ ತೆಗೆದು ಯುದ್ಧ ಮಾಡಲು ಶುರುವಾಯಿತು….!

ಅನಿವಾರ್‍ಯವಾಗಿ ಯುದ್ಧ ಮಾಡಲು ಭಾರತ ಮುಂದಾಯಿತು. ಹೊಸದಾಗಿ ಅಧಿಕಾರ ಸ್ವೀಕರಿಸಿದ ಶಾಸ್ತ್ರೀಜಿಯವರು ಇಡೀ ಸೈನ್ಯವೇನು ಇಡೀ ದೇಶವನ್ನೇ ಹುರಿದುಂಬಿಸಿದರು.

ಇದೇ ಸಮಯದಲ್ಲಿ- ಸುದ್ದಿ ಮಾಧ್ಯಮದವರು ಗಣ್ಯರು ಪ್ರಮುಖರು ಎಲ್ಲರೂ ಪ್ರಧಾನಿಯವರನ್ನು ಮುತ್ತಿ “ನಿಮ್ಮ ಮುಂದಿನ ಸವಾಲ್ ಯಾವುದು?” ಎಂದು ಎಲ್ಲರೂ ಕೇಳಿದರು.

ಲಾಲ್‌ಬಹದ್ದೂರ್ ಶಾಸ್ತ್ರಿಯವರು ಕ್ಷಣ ಹೊತ್ತು ಗಂಭೀರವಾಗಿ ಚಿಂತಿಸಿದರು. ಅವರೇ ಮಾತಿಗೆ ತೊಡಗಿದರು…

“ನನ್ನ ಮುಂದಿರುವ ಸವಾಲು ಎಂದರೆ… ನಮ್ಮ ದೇಶವನ್ನು ಬಲಿಷ್ಠವನ್ನಾಗಿಸುವುದು” ಎಂದರು.

ಅಲ್ಲಿದ್ದವರೆಲ್ಲ ಅವಕ್ಕಾಗಿ ಕುಳಿತರು.

ತುಸು ಹೊತ್ತು ಗಂಭೀರತೆಯಿಂದ ಚಿಂತಿಸಿದ ಸುದ್ದಿ ಮಾಧ್ಯಮದವರೆಲ್ಲ “ಸಾರ್, ಒಂದೋ ಎರಡೋ ಮೂರೋ ಸಮಸ್ಯೆಗಳಿದ್ದರೆ ನೀವು ಎದುರಿಸುವಿರೆಂದು ಭಾವಿಸಬಹುದಾಗಿತ್ತು! ಆದರೆ…. ಬಲಿಷ್ಠ ಶತ್ರು ರಾಷ್ಟ್ರ ಚೀನಾ ಆಕ್ರಮಣದ ಜೊತೆಗೆ ದೇಶ, ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದೆಯಲ್ಲಾ? ಹೇಗೆ ಮುನ್ನಡೆಸುವಿರಿ?” ಎಂದು ಮತ್ತೊಂದು ಪ್ರಶ್ನೆ ಎಸೆದರು.

ಆಗ ಯೋಚಿಸುವ ಮೌನ ವಹಿಸುವ ಗೋಜಿಗೇ ಹೋಗದೆ ಥಟ್ಟನೆ- “ನಾನು ನನ್ನ ಜನರನ್ನು ನಂಬಿದ್ದೇನೆ. ಅವರ ಬಲವನ್ನು ಅರಿತಿದ್ದೇನೆ. ಜೈಜವಾನ್, ಜೈಕಿಸಾನ್ ಎಂದು ರೈತಣ್ಣವನ್ನು ಬಡಿದೆಬ್ಬಿಸುತ್ತೇನೆ. ಇಡೀ ದೇಶವಾಸಿಯು ಪ್ರತಿ ಸೋಮವಾರ ರಾತ್ರಿ ಒಂದು ಊಟ ದೇಶಕ್ಕಾಗಿ ಬಿಡಲು ವಿನಂತಿಸುತ್ತೇನೆ. ಭಾರತೀಯ ಸೇನೆಯಲ್ಲಿ ಒಂದು ರಾಷ್ಟ್ರೀಯತೆ ಐಕ್ಯಮಂತ್ರ ರಾಷ್ಟ್ರ ಪ್ರೇಮ ದೇಶಭಕ್ತಿ ಮೆರೆಯಲು ಕರೆ ಕೊಡುವೆ… ದೇಶದ ಅತ್ಯುನ್ನತ ಸೇವಕನಾಗಿ ನಾನೂ ರಾತ್ರಿ ಊಟ ತ್ಯಜಿಸಿರುವೆ. ಅದನ್ನು ಅಭ್ಯಾಸ ಮಾಡಿ ಎಲ್ಲರಿಗೆ ವಿನಂತಿಸಿರುವೆ. ನನ್ನ ಜನ ನನ್ನ ಮಾತುಗಳನ್ನು ದೇಶವನ್ನು ಮರೆಯಲಾಗದು… ವಿಜಯಪಥ, ಜಯಪಥ, ಪ್ರಗತಿಪಥ ನಮ್ಮದು. ಬರೀ ಒಂದು ಚೀನಾವಲ್ಲ ಅಂಥಾ ನೂರು ಚೀನಾ ದೇಶಗಳು ದಾಳಿ ಮಾಡಿದರೂ ನಮ್ಮ ಸೈನ್ಯ ಬಲವನ್ನು ಎದುರಿಸಲಾರವು” ಎಂದು ಶಾಸ್ತ್ರೀಜಿಯವರು ಅಂದರು.

ಅಲ್ಲಿದ್ದವರೆಲ್ಲ ದಂಗುಬಡಿದು ಹೋದರು. “ಸಾರ್….. ನಿಮ್ಮ ಮಾತು ಕೃತಿ ಆದರ್ಶ ಸರಳ ಸಜ್ಜನಿಕೆ ಖಂಡಿತ ದೇಶವನ್ನು ಮುನ್ನಡೆಸುವವು.. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು. ನಿಮ್ಮ ಜೊತೆಗೆ ನಾವೊಂದೇ ಇಲ್ಲ! ಇಡೀ ದೇಶದ ಜನತೆಯೇ ಇದೆ…” ಎಂದು ಹೃದಯ ತುಂಬಿ ಅಂದರಲ್ಲದೆ, ನಮಸ್ಕರಿಸಿ, ಹರ್ಷದಿ ಹೊರಟುಹೋದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...