Home / ಲೇಖನ / ವಿಜ್ಞಾನ / ಇನ್ನು ರೋಬೊಟ್‌ಗಳ ಕೆಲಸ

ಇನ್ನು ರೋಬೊಟ್‌ಗಳ ಕೆಲಸ

“ಇನ್ನು ಮುಂದೆ ರೋಬೊಟ್‌ಗಳು ಬೇಕಾಗಿವೆ!” ಎಂಬ ಜಾಹೀರಾತು ನೀಡುವ ಕಾಲವಿನ್ನು ದೂರವಿಲ್ಲ!

ಒಂದು ರೋಬೊಟ್- ಸರಾಸರಿ ೬ ರಿಂದ ೮ ಕಾರ್‍ಮಿಕರ ಕೆಲಸ ಕಾರ್‍ಯಗಳನ್ನು ಸುಗಮವಾಗಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿವೆಂದು ಚೀನಾದೇಶದ ಬೀಜಿಂಗ್‌ನಲ್ಲಿ ಸಾಬೀತು ಪಡಿಸಿರುವುದು.

ಈಗಾಗಲೇ ಚೀನಾದ ಡಂಗೌನ್ ನಗರದ ಮೊಬೈಲ್ ಫೋನ್ ಉತ್ಪಾದನಾ ಘಟಕವು ಸಂಪೂರ್ಣವಾಗಿ ಮಾನವ ರಹಿತವಾಗಿದ್ದು ಅಲ್ಲಿನ ಎಲ್ಲಾ ಕೆಲಸ ಕಾರ್‍ಯಗಳನ್ನೂ ಅಲ್ಲಿನ ಕಂಪ್ಯೂಟರ್ ನಿಯಂತ್ರಿತ ರೋಬೊಟ್‌ಗಳು ಈಗಾಗಲೇ ಪರಿಪೂರ್ಣವಾಗಿ ಕೆಲಸ ನಿರ್ವಹಿಸಿ ವಿಶ್ವವ್ಯಾಪ್ತಿ ಶಹಭಾಸ್‌ಗಿರಿ ಪಡೆದಿವೆ…!

ಈಗೀಗ ಅಲ್ಲಲ್ಲಿ… ಚೀನಾದಲ್ಲಿ “ರೋಬೊಟ್‌ಗಳು ಬೇಕಾಗಿವೆ…” ಎಂಬ ನಾಮಫಲಕಗಳೂ ಜಾಹೀರಾತುಗಳು ರಾರಾಜಿಸುತ್ತಿವೆ!!

ಚೀನಾ ದೇಶದಲ್ಲಿ ಈಗಾಗಲೇ ಕಟ್ಟುನಿಟ್ಟಿನ ಜನಸಂಖ್ಯೆ ನಿಯಂತ್ರಣಾ ಭಾರೀ ಭಾರೀ ಕ್ರಮದಿಂದಾಗಿ ಅಲ್ಲಿನ ಜನಸಂಖ್ಯೆ ಗಣನೀಯವಾಗಿ ಇಳಿಮುಖ ಕಂಡಿದೆ. ಹೀಗಾಗಿ ಎಲ್ಲೆಲ್ಲೂ ಕಾರ್ಮಿಕರ ಬೃಹತ್ ಸಮಸ್ಯೆ ತಲೆದೋರಿದೆ. ಇದರಿಂದಾಗಿ – ಇನ್ನು ಮುಂದೆ ರೋಬೊಟ್‌ಗಳನ್ನೇ ಹೆಚ್ಚೆಚ್ಚು ಅಭಿವೃದ್ಧಿ ಪಡಿಸಬೇಕಾದ ತುರ್‍ತು ಅಲ್ಲಿ ತಲೆದೋರಿದೆ.

ಇಲ್ಲಿನ ಡಂಗೌನ್ ನಗರದ ಮೊಬೈಲ್ ಫೋನ್ ಉತ್ಪಾದನಾ ಘಟಕದಲ್ಲಿ ಎಲ್ಲ ಕೆಲಸಗಳನ್ನು ಕಂಪ್ಯೂಟರ್ ನಿಯಂತ್ರಿತ ರೋಬೊಟ್‌ಗಳು ಮಾಡಿ ಪೂರೈಸುತ್ತಿವೆ. ಚೀನಾದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಜನರಿಲ್ಲದ ಮೊದಲ ಕಾರ್ಖಾನೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕಂಪೆನಿಯ ಎಲ್ಲ ಸರಕು ಸಾಗಣೆ ಟ್ರಕ್‌ಗಳು ರೋಬೊಟ್‌ಗಳ ಮೂಲಕ ಗೋದಾಮುಗಳಿಗೆ ಸರಕುಗಳನ್ನು ಸಾಗಿಸುತ್ತವೆ. ತಾಂತ್ರಿಕ ಸಿಬ್ಬಂದಿ ನಿಯಂತ್ರಣ ಕಚೇರಿಯಲ್ಲಿ ಕಂಪ್ಯೂಟರ್‌ನಲ್ಲಿ ಕೆಲಸ ಕಾರ್ಯಗಳನ್ನು ನೋಡುತ್ತಾರೆ. ಉಳಿದಂತೆಲ್ಲವನ್ನೂ ಸಂಪೂರ್ಣವಾಗಿ ಈ ಎಲ್ಲ ರೊಬೋಟ್‌ಗಳೇ ಮಾಡುತ್ತವೆ.

ಇಲ್ಲಿ ಸುಮಾರು ೬೫೦ ಜನ ಕಾರ್‍ಮಿಕರು ಕೆಲಸ ನಿರ್ವಹಿಸಬೇಕು. ಆದರೆ ೬೦ ಕಾರ್ಮಿಕರು ಮಾತ್ರ ಕೆಲಸ ಮಾಡುತ್ತಿದ್ದಾರೆ! ಇದನ್ನು ೨೦ ಕ್ಕೆ ಇಳಿಸುವ ಚಿಂತನೆ ನಡೆಸುತ್ತಿದ್ದು ಇನ್ನು ೫ ರೋಬೊಟ್‌ಗಳನ್ನು ಹೆಚ್ಚಿಸಲು ಕ್ರಮ ಕೈಗೊಂಡಿರುವರು.

ಬೇರೆ ಬೇರೆ ರಾಷ್ಟ್ರದವರೆಲ್ಲ ಬಂದು ಒಂದು ಕಾರ್ಮಿಕರಿಲ್ಲದ ಕಂಪೆನಿಯನ್ನು ಕುತೂಹಲದಿಂದ ನೋಡುತ್ತಿದ್ದಾರೆ. ಇಂಥಾದೊಂದು ಜನರಿಲ್ಲದ ಕಾರ್ಖಾನೆ ಆರಂಭಿಸುವ ಚಿಂತನೆ ನಡೆಸಿರುವರು.

ಬರುಬರುತ್ತಾ ಜನರಿಲ್ಲದ ಕಾರ್ಖಾನೆಗಳನ್ನು ಎಲ್ಲ ದೇಶ ವಿದೇಶಗಳಲ್ಲಿ ಆರಂಭಿಸಿದರೆ ಮುಂದಿನ ಜನಾಂಗದ ಗತಿ ಹೇಗೆಂದು ಈಗಾಗಲೇ ಚಿಂತೆಯಾಗಿದೆ…
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...