Home / ಲೇಖನ / ಇತರೆ / ಯುವಪೀಳಿಗೆ ಎತ್ತ ಸಾಗಿದೆ?

ಯುವಪೀಳಿಗೆ ಎತ್ತ ಸಾಗಿದೆ?

ಇಂದಿನ ಯುವ ಪೀಳಿಗೆ ಬಗ್ಗೆ ಕೇಳಿದರೆ, ಓದಿದರೆ, ನೋಡಿದರೆ ‘ಅಯ್ಯೋ ಪಾಪ!’ ಅನಿಸುವುದು.

ದುಡ್ಡಿಗಾಗಿ ಏನೆಲ್ಲ ಮಾಡುತ್ತಿರುವರು… ಎಂದಾಗ ಇಲ್ಲಿ ಬರೆಯಲು ಮನಸ್ಸು ಬರುತ್ತಿಲ್ಲ. ಆ ರೀತಿ ನಡೆದುಕೊಳ್ಳುತ್ತಿರುವರು. ದುಡ್ಡೇ ದೊಡ್ಡಪ್ಪ. ದುಡ್ಡಿನ ಮುಂದೆ ಬೇರೆ ದೇವರಿಲ್ಲವೆಂದು ಕೆಲವರು ಭಾವಿಸಿ, ದುಡ್ಡಿಗಾಗಿ, ಪಾಕೆಟ್ ಮನಿಗಾಗಿ, ಸ್ಮಾರ್ಟ್ ಫೋನಿಗಾಗಿ ಏನೆಲ್ಲ ಕಳೆದುಕೊಳ್ಳಲು ಸಿದ್ಧರು, ಬದ್ಧರು. ಶತಸಿದ್ಧರಾಗಿ ನಿಂತಿರುವರು.

ಇದು ಬರಿಯ ಲಖನೌದ ಕೊಯ್ಲಿಯಲ್ಲಿ ಜರುಗಿದ ಕಥೆ ವ್ಯಥೆಯಲ್ಲ. ಎಲ್ಲ ಕಡೆ ಜರುಗುತ್ತಿದೆ. ಇದನ್ನು ಬೆಳಕಿಗೆ ಬಂದಿಲ್ಲ ಅಷ್ಟೇ

ಶಾಲಾ ಕಾಲೇಜು ಮಕ್ಕಳು ಕೆಲವರಿಗೆ ಸ್ಮಾರ್ಟ್ ಫೋನ್ ಅಂದ್ರೆ ಜೀವ. ಕೊಳ್ಳಲು ಕಾಸಿಲ್ಲ. ಯಾರನ್ನು ಕೇಳುವುದು? ಅವರಿವರ ಕೈಯಲ್ಲಿ ಫೋನ್ ನೋಡಿ ತಾವೆ ಕೊಳ್ಳಲು ಮಾರ್ಗ ಹುಡುಕಿದರು! ಕೇವಲ ೫೦೦ ರೂಪಾಯಿಗೆ ರಕ್ತ ಮಾರಿಕೊಂಡರು. ವಯಸ್ಸು ೧೪ ವರ್‍ಷ ಮಾತ್ರ.

ಈ ರೀತಿ ಮೂರು ಜನ ತಮ್ಮ ರಕ್ತ ಮಾರಿದರು. ದಲ್ಲಾಳಿಗಳು ರಕ್ತ ನಿಧಿಗೆ ಕರೆದೊಯ್ಯುವರು. ಹಣ ಕೊಟ್ಟು ರಕ್ತ ಬಸಿದು ಕಳಿಸಿದರು. ನಾಲ್ಕು ವರ್ಷದ ಹಿಂದೆ ಇದೇ ಸಂಜಯ್‌ನ ಅಪ್ಪ ತೀರಿ ಹೋದ, ಕ್ಲಿನಿಕ್‌ನಲ್ಲಿ ಅಮ್ಮ ದುಡಿದರೆ ೩೦೦೦ ರೂಪಾಯಿ, ಸಂಜಯ್ ಬಟ್ಟೆ ಅಂಗಡಿಲಿ ೨೦೦೦ ರೂಪಾಯಿ ದುಡಿದರೂ ಹೊಟ್ಟೆ ಬಟ್ಟೆ ಮನೆ ಬಾಡಿಗೆ ಸಾಲುತ್ತಿರಲಿಲ್ಲ. ಹೀಗೆ ಸಂಜಯ್-ವಿನೂತ್-ಪುನೀತ್ ರಕ್ತ ನೀಡಿರುವರು.

ರಕ್ತದಾನ ಮಾಡಲು ಕಡ್ಡಾಯವಾಗಿ ೧೮ ವರ್‍ಷ ತುಂಬಿರಬೇಕು. ಆರೋಗ್ಯವಂತನಾಗಿರಬೇಕು.

ಹಿಮೊಗ್ಲೋಬಿನ್ ಮಟ್ಟ ಕನಿಷ್ಠ ೧೩ ಇರಲೇಬೇಕು. ಈಗಾಗಲೇ ರಕ್ತ ನೀಡಿ ೩ ತಿಂಗಳಾಗಿರಬೇಕು!

ಹೀಗಾಗಿ ಲಖನೌದ ಕೊಯ್ಲಿಯಲ್ಲಿರುವ ರಕ್ತ ನಿಧಿಗೆ ಬೀಗ ಹಾಕಿರುವ ಪೊಲೀಸರು ಮೂವರು ಏಜೆಂಟರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತಪ್ಪಿತಸ್ಥರನ್ನು ಕಟಕಟೆಗೆ ಹತ್ತಿಸಿರುವರು.

ಆದ್ದರಿಂದ ಮಕ್ಕಳೆ ಓದುವಾಗ ಓದಬೇಕು.

ಓದುವಾಗ ಗಳಿಕೆ ಸಲ್ಲ. ವಾಮ ಮಾರ್ಗದಿಂದ ಗಳಿಸಿದ್ದು ನರಕದ ಸಮಾನ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ