Home / ಲೇಖನ / ಇತರೆ / ಯುವಪೀಳಿಗೆ ಎತ್ತ ಸಾಗಿದೆ?

ಯುವಪೀಳಿಗೆ ಎತ್ತ ಸಾಗಿದೆ?

ಇಂದಿನ ಯುವ ಪೀಳಿಗೆ ಬಗ್ಗೆ ಕೇಳಿದರೆ, ಓದಿದರೆ, ನೋಡಿದರೆ ‘ಅಯ್ಯೋ ಪಾಪ!’ ಅನಿಸುವುದು.

ದುಡ್ಡಿಗಾಗಿ ಏನೆಲ್ಲ ಮಾಡುತ್ತಿರುವರು… ಎಂದಾಗ ಇಲ್ಲಿ ಬರೆಯಲು ಮನಸ್ಸು ಬರುತ್ತಿಲ್ಲ. ಆ ರೀತಿ ನಡೆದುಕೊಳ್ಳುತ್ತಿರುವರು. ದುಡ್ಡೇ ದೊಡ್ಡಪ್ಪ. ದುಡ್ಡಿನ ಮುಂದೆ ಬೇರೆ ದೇವರಿಲ್ಲವೆಂದು ಕೆಲವರು ಭಾವಿಸಿ, ದುಡ್ಡಿಗಾಗಿ, ಪಾಕೆಟ್ ಮನಿಗಾಗಿ, ಸ್ಮಾರ್ಟ್ ಫೋನಿಗಾಗಿ ಏನೆಲ್ಲ ಕಳೆದುಕೊಳ್ಳಲು ಸಿದ್ಧರು, ಬದ್ಧರು. ಶತಸಿದ್ಧರಾಗಿ ನಿಂತಿರುವರು.

ಇದು ಬರಿಯ ಲಖನೌದ ಕೊಯ್ಲಿಯಲ್ಲಿ ಜರುಗಿದ ಕಥೆ ವ್ಯಥೆಯಲ್ಲ. ಎಲ್ಲ ಕಡೆ ಜರುಗುತ್ತಿದೆ. ಇದನ್ನು ಬೆಳಕಿಗೆ ಬಂದಿಲ್ಲ ಅಷ್ಟೇ

ಶಾಲಾ ಕಾಲೇಜು ಮಕ್ಕಳು ಕೆಲವರಿಗೆ ಸ್ಮಾರ್ಟ್ ಫೋನ್ ಅಂದ್ರೆ ಜೀವ. ಕೊಳ್ಳಲು ಕಾಸಿಲ್ಲ. ಯಾರನ್ನು ಕೇಳುವುದು? ಅವರಿವರ ಕೈಯಲ್ಲಿ ಫೋನ್ ನೋಡಿ ತಾವೆ ಕೊಳ್ಳಲು ಮಾರ್ಗ ಹುಡುಕಿದರು! ಕೇವಲ ೫೦೦ ರೂಪಾಯಿಗೆ ರಕ್ತ ಮಾರಿಕೊಂಡರು. ವಯಸ್ಸು ೧೪ ವರ್‍ಷ ಮಾತ್ರ.

ಈ ರೀತಿ ಮೂರು ಜನ ತಮ್ಮ ರಕ್ತ ಮಾರಿದರು. ದಲ್ಲಾಳಿಗಳು ರಕ್ತ ನಿಧಿಗೆ ಕರೆದೊಯ್ಯುವರು. ಹಣ ಕೊಟ್ಟು ರಕ್ತ ಬಸಿದು ಕಳಿಸಿದರು. ನಾಲ್ಕು ವರ್ಷದ ಹಿಂದೆ ಇದೇ ಸಂಜಯ್‌ನ ಅಪ್ಪ ತೀರಿ ಹೋದ, ಕ್ಲಿನಿಕ್‌ನಲ್ಲಿ ಅಮ್ಮ ದುಡಿದರೆ ೩೦೦೦ ರೂಪಾಯಿ, ಸಂಜಯ್ ಬಟ್ಟೆ ಅಂಗಡಿಲಿ ೨೦೦೦ ರೂಪಾಯಿ ದುಡಿದರೂ ಹೊಟ್ಟೆ ಬಟ್ಟೆ ಮನೆ ಬಾಡಿಗೆ ಸಾಲುತ್ತಿರಲಿಲ್ಲ. ಹೀಗೆ ಸಂಜಯ್-ವಿನೂತ್-ಪುನೀತ್ ರಕ್ತ ನೀಡಿರುವರು.

ರಕ್ತದಾನ ಮಾಡಲು ಕಡ್ಡಾಯವಾಗಿ ೧೮ ವರ್‍ಷ ತುಂಬಿರಬೇಕು. ಆರೋಗ್ಯವಂತನಾಗಿರಬೇಕು.

ಹಿಮೊಗ್ಲೋಬಿನ್ ಮಟ್ಟ ಕನಿಷ್ಠ ೧೩ ಇರಲೇಬೇಕು. ಈಗಾಗಲೇ ರಕ್ತ ನೀಡಿ ೩ ತಿಂಗಳಾಗಿರಬೇಕು!

ಹೀಗಾಗಿ ಲಖನೌದ ಕೊಯ್ಲಿಯಲ್ಲಿರುವ ರಕ್ತ ನಿಧಿಗೆ ಬೀಗ ಹಾಕಿರುವ ಪೊಲೀಸರು ಮೂವರು ಏಜೆಂಟರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತಪ್ಪಿತಸ್ಥರನ್ನು ಕಟಕಟೆಗೆ ಹತ್ತಿಸಿರುವರು.

ಆದ್ದರಿಂದ ಮಕ್ಕಳೆ ಓದುವಾಗ ಓದಬೇಕು.

ಓದುವಾಗ ಗಳಿಕೆ ಸಲ್ಲ. ವಾಮ ಮಾರ್ಗದಿಂದ ಗಳಿಸಿದ್ದು ನರಕದ ಸಮಾನ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...