Home / ಲೇಖನ / ಇತರೆ / ಯುವಪೀಳಿಗೆ ಎತ್ತ ಸಾಗಿದೆ?

ಯುವಪೀಳಿಗೆ ಎತ್ತ ಸಾಗಿದೆ?

ಇಂದಿನ ಯುವ ಪೀಳಿಗೆ ಬಗ್ಗೆ ಕೇಳಿದರೆ, ಓದಿದರೆ, ನೋಡಿದರೆ ‘ಅಯ್ಯೋ ಪಾಪ!’ ಅನಿಸುವುದು.

ದುಡ್ಡಿಗಾಗಿ ಏನೆಲ್ಲ ಮಾಡುತ್ತಿರುವರು… ಎಂದಾಗ ಇಲ್ಲಿ ಬರೆಯಲು ಮನಸ್ಸು ಬರುತ್ತಿಲ್ಲ. ಆ ರೀತಿ ನಡೆದುಕೊಳ್ಳುತ್ತಿರುವರು. ದುಡ್ಡೇ ದೊಡ್ಡಪ್ಪ. ದುಡ್ಡಿನ ಮುಂದೆ ಬೇರೆ ದೇವರಿಲ್ಲವೆಂದು ಕೆಲವರು ಭಾವಿಸಿ, ದುಡ್ಡಿಗಾಗಿ, ಪಾಕೆಟ್ ಮನಿಗಾಗಿ, ಸ್ಮಾರ್ಟ್ ಫೋನಿಗಾಗಿ ಏನೆಲ್ಲ ಕಳೆದುಕೊಳ್ಳಲು ಸಿದ್ಧರು, ಬದ್ಧರು. ಶತಸಿದ್ಧರಾಗಿ ನಿಂತಿರುವರು.

ಇದು ಬರಿಯ ಲಖನೌದ ಕೊಯ್ಲಿಯಲ್ಲಿ ಜರುಗಿದ ಕಥೆ ವ್ಯಥೆಯಲ್ಲ. ಎಲ್ಲ ಕಡೆ ಜರುಗುತ್ತಿದೆ. ಇದನ್ನು ಬೆಳಕಿಗೆ ಬಂದಿಲ್ಲ ಅಷ್ಟೇ

ಶಾಲಾ ಕಾಲೇಜು ಮಕ್ಕಳು ಕೆಲವರಿಗೆ ಸ್ಮಾರ್ಟ್ ಫೋನ್ ಅಂದ್ರೆ ಜೀವ. ಕೊಳ್ಳಲು ಕಾಸಿಲ್ಲ. ಯಾರನ್ನು ಕೇಳುವುದು? ಅವರಿವರ ಕೈಯಲ್ಲಿ ಫೋನ್ ನೋಡಿ ತಾವೆ ಕೊಳ್ಳಲು ಮಾರ್ಗ ಹುಡುಕಿದರು! ಕೇವಲ ೫೦೦ ರೂಪಾಯಿಗೆ ರಕ್ತ ಮಾರಿಕೊಂಡರು. ವಯಸ್ಸು ೧೪ ವರ್‍ಷ ಮಾತ್ರ.

ಈ ರೀತಿ ಮೂರು ಜನ ತಮ್ಮ ರಕ್ತ ಮಾರಿದರು. ದಲ್ಲಾಳಿಗಳು ರಕ್ತ ನಿಧಿಗೆ ಕರೆದೊಯ್ಯುವರು. ಹಣ ಕೊಟ್ಟು ರಕ್ತ ಬಸಿದು ಕಳಿಸಿದರು. ನಾಲ್ಕು ವರ್ಷದ ಹಿಂದೆ ಇದೇ ಸಂಜಯ್‌ನ ಅಪ್ಪ ತೀರಿ ಹೋದ, ಕ್ಲಿನಿಕ್‌ನಲ್ಲಿ ಅಮ್ಮ ದುಡಿದರೆ ೩೦೦೦ ರೂಪಾಯಿ, ಸಂಜಯ್ ಬಟ್ಟೆ ಅಂಗಡಿಲಿ ೨೦೦೦ ರೂಪಾಯಿ ದುಡಿದರೂ ಹೊಟ್ಟೆ ಬಟ್ಟೆ ಮನೆ ಬಾಡಿಗೆ ಸಾಲುತ್ತಿರಲಿಲ್ಲ. ಹೀಗೆ ಸಂಜಯ್-ವಿನೂತ್-ಪುನೀತ್ ರಕ್ತ ನೀಡಿರುವರು.

ರಕ್ತದಾನ ಮಾಡಲು ಕಡ್ಡಾಯವಾಗಿ ೧೮ ವರ್‍ಷ ತುಂಬಿರಬೇಕು. ಆರೋಗ್ಯವಂತನಾಗಿರಬೇಕು.

ಹಿಮೊಗ್ಲೋಬಿನ್ ಮಟ್ಟ ಕನಿಷ್ಠ ೧೩ ಇರಲೇಬೇಕು. ಈಗಾಗಲೇ ರಕ್ತ ನೀಡಿ ೩ ತಿಂಗಳಾಗಿರಬೇಕು!

ಹೀಗಾಗಿ ಲಖನೌದ ಕೊಯ್ಲಿಯಲ್ಲಿರುವ ರಕ್ತ ನಿಧಿಗೆ ಬೀಗ ಹಾಕಿರುವ ಪೊಲೀಸರು ಮೂವರು ಏಜೆಂಟರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತಪ್ಪಿತಸ್ಥರನ್ನು ಕಟಕಟೆಗೆ ಹತ್ತಿಸಿರುವರು.

ಆದ್ದರಿಂದ ಮಕ್ಕಳೆ ಓದುವಾಗ ಓದಬೇಕು.

ಓದುವಾಗ ಗಳಿಕೆ ಸಲ್ಲ. ವಾಮ ಮಾರ್ಗದಿಂದ ಗಳಿಸಿದ್ದು ನರಕದ ಸಮಾನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...