Home / ಲೇಖನ / ವ್ಯಕ್ತಿ / ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...