Home / ಲೇಖನ / ವ್ಯಕ್ತಿ / ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...