ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಕ ಮಹಾದೇವಿಯ ಹಾಡು
Next post ನಿಂತಿವೆ ಬಿಂಬಗಳು

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…