Home / ಲೇಖನ / ವ್ಯಕ್ತಿ / ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು.

ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು ನಮಗೆಲ್ಲ ಇಂದು ಹಿರಿಸಾಕ್ಷಿಯಾಗಿರುವರು. ಸುಪ್ರಿಯಾ ದಯಾನಂದ್ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನ ಗೆಜ್ಜೆ ಹಣಕೋಡು ಗ್ರಾಮದ ಹೆಮ್ಮೆಯ ಸುಪುತ್ರಿ.ತಂದೆ- ಸಿದ್ಧಿ ಪ್ರಸಿದ್ಧಿ ಕಾಫಿ ಬೆಳೆಗಾರರಾದ ದಯಾನಂದ್ ತಾಯಿ- ಅಮ್ಮ ಕಾವೇರಮ್ಮನ ವರಪುತ್ರಿ ಕವಿತಾ.

ಸುಪ್ರಿಯಾ ದಯಾನಂದ್ ಈಗ ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಕೃಷಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ.

ದಿನಾಂಕ ೧೨-೦೮-೨೦೧೫ ರಿಂದ ೨೨-೦೮-೨೦೧೫ ರವರೆಗೆ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜರುಗಲಿರುವ ಜಾಗತಿಕ ಮಟ್ಟದ ಆಹಾರ ಪದ್ಧತಿ ಕುರಿತು ಬೃಹತ್ ವಿಚಾರ ಸಂಕೀರ್ಣಕ್ಕೆ ಭವ್ಯ ಭಾರತದಿಂದ ಏಕೈಕ ಪ್ರತಿನಿಧಿಯಾಗಿ ಇವರು ಹೋಗಿ ಬರಲಿದ್ದಾರೆ.

ಇಲ್ಲಿ ವಿಶ್ವದ ೫೦ ದೇಶದ ಪ್ರತಿನಿಧಿಗಳು ತಮ್ಮ ತಮ್ಮ ದೇಶಗಳಲ್ಲಿನ ಆಹಾರ- ಬೀಜ-ದವಸ-ಧಾನ್ಯ-ತಳಿಗಳ ಉತ್ಪಾದನೆ, ಆಮದು, ರಫ್ತು ಗುಣಮಟ್ಟ, ಮಾರುಕಟ್ಟೆಯ ಬಗ್ಗೆ ವ್ಯಾಪಕ ಚರ್ಚೆ, ಪ್ರಬಂಧ ವಿಚಾರ ವಿನಿಮಯ ನಡೆಯಲಿದೆ.

ದಿನಾಂಕ ೧೬-೦೯-೨೦೧೫ ರಿಂದ ೨೦೧೬ ರ ಫೆಬ್ರವರಿವರೆಗೆ ಬೆಲ್ಲಿಯಂನ ಗೆಂಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ಸುವರ್ಣಾವಕಾಶವನ್ನು ಸುಪ್ರಿಯಾ ದಯಾನಂದ್ ಅವರು ಪಡೆದುಕೊಂಡಿರುವರು.

ಹೀಗೆ ಸುಪ್ರಿಯಾ ದಯಾನಂದ್ ತಾನುಟ್ಟಿದ ಊರಿಗೆ, ತಂದೆತಾಯಿಗೆ, ಕಲಿತ ಶಾಲೆ ಕಾಲೇಜಿಗೆ ಕೀರ್ತಿ ತಂದಿರುವರು. ಇವರ ಪ್ರತಿಭೆ, ಉತ್ಪತ್ತಿ, ವಿದ್ವತ್ ಉಳಿದವರಿಗೆ ಸ್ಫೂರ್ತಿದಾಯಕ ಹರ್ಷದಾಯಕವಾಗಿದೆ.

ಕಲಿತರೆ ಇದ್ದರೆ ಇರಬೇಕು ಸುಪ್ರಿಯಾ ದಯಾನಂದ್‌ವರಂತೆ, ಪ್ರತಿಭಾವಂತ ಮಕ್ಕಳು ಅಲ್ಲವೇ?

ನಾವು ನೀವು ಎಲ್ಲರೂ ಸುಪ್ರಿಯಾ ದಯಾನಂದ್ ಅವರಿಗೆ ಆಲ್ ದಿ ಬೆಸ್ಟ್, ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...