Home / ಲೇಖನ / ವ್ಯಕ್ತಿ / ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು.

ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು ನಮಗೆಲ್ಲ ಇಂದು ಹಿರಿಸಾಕ್ಷಿಯಾಗಿರುವರು. ಸುಪ್ರಿಯಾ ದಯಾನಂದ್ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನ ಗೆಜ್ಜೆ ಹಣಕೋಡು ಗ್ರಾಮದ ಹೆಮ್ಮೆಯ ಸುಪುತ್ರಿ.ತಂದೆ- ಸಿದ್ಧಿ ಪ್ರಸಿದ್ಧಿ ಕಾಫಿ ಬೆಳೆಗಾರರಾದ ದಯಾನಂದ್ ತಾಯಿ- ಅಮ್ಮ ಕಾವೇರಮ್ಮನ ವರಪುತ್ರಿ ಕವಿತಾ.

ಸುಪ್ರಿಯಾ ದಯಾನಂದ್ ಈಗ ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಕೃಷಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ.

ದಿನಾಂಕ ೧೨-೦೮-೨೦೧೫ ರಿಂದ ೨೨-೦೮-೨೦೧೫ ರವರೆಗೆ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜರುಗಲಿರುವ ಜಾಗತಿಕ ಮಟ್ಟದ ಆಹಾರ ಪದ್ಧತಿ ಕುರಿತು ಬೃಹತ್ ವಿಚಾರ ಸಂಕೀರ್ಣಕ್ಕೆ ಭವ್ಯ ಭಾರತದಿಂದ ಏಕೈಕ ಪ್ರತಿನಿಧಿಯಾಗಿ ಇವರು ಹೋಗಿ ಬರಲಿದ್ದಾರೆ.

ಇಲ್ಲಿ ವಿಶ್ವದ ೫೦ ದೇಶದ ಪ್ರತಿನಿಧಿಗಳು ತಮ್ಮ ತಮ್ಮ ದೇಶಗಳಲ್ಲಿನ ಆಹಾರ- ಬೀಜ-ದವಸ-ಧಾನ್ಯ-ತಳಿಗಳ ಉತ್ಪಾದನೆ, ಆಮದು, ರಫ್ತು ಗುಣಮಟ್ಟ, ಮಾರುಕಟ್ಟೆಯ ಬಗ್ಗೆ ವ್ಯಾಪಕ ಚರ್ಚೆ, ಪ್ರಬಂಧ ವಿಚಾರ ವಿನಿಮಯ ನಡೆಯಲಿದೆ.

ದಿನಾಂಕ ೧೬-೦೯-೨೦೧೫ ರಿಂದ ೨೦೧೬ ರ ಫೆಬ್ರವರಿವರೆಗೆ ಬೆಲ್ಲಿಯಂನ ಗೆಂಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ಸುವರ್ಣಾವಕಾಶವನ್ನು ಸುಪ್ರಿಯಾ ದಯಾನಂದ್ ಅವರು ಪಡೆದುಕೊಂಡಿರುವರು.

ಹೀಗೆ ಸುಪ್ರಿಯಾ ದಯಾನಂದ್ ತಾನುಟ್ಟಿದ ಊರಿಗೆ, ತಂದೆತಾಯಿಗೆ, ಕಲಿತ ಶಾಲೆ ಕಾಲೇಜಿಗೆ ಕೀರ್ತಿ ತಂದಿರುವರು. ಇವರ ಪ್ರತಿಭೆ, ಉತ್ಪತ್ತಿ, ವಿದ್ವತ್ ಉಳಿದವರಿಗೆ ಸ್ಫೂರ್ತಿದಾಯಕ ಹರ್ಷದಾಯಕವಾಗಿದೆ.

ಕಲಿತರೆ ಇದ್ದರೆ ಇರಬೇಕು ಸುಪ್ರಿಯಾ ದಯಾನಂದ್‌ವರಂತೆ, ಪ್ರತಿಭಾವಂತ ಮಕ್ಕಳು ಅಲ್ಲವೇ?

ನಾವು ನೀವು ಎಲ್ಲರೂ ಸುಪ್ರಿಯಾ ದಯಾನಂದ್ ಅವರಿಗೆ ಆಲ್ ದಿ ಬೆಸ್ಟ್, ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ